ಬಂಟ್ವಾಳ

ಬಸ್ ಸ್ಟ್ಯಾಂಡ್ ಗಾಗಿ ಹಳೇ ಕಟ್ಟಡ ತೆರವಿಗೆ ತಾಪಂ ಅಸ್ತು

taluk panchayath meeting

ತಾಪಂನ ಹಳೇ ಕಟ್ಟಡ ತೆರವುಗೊಳಿಸಿ ಪಿಪಿಪಿ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸಲು ಶನಿವಾರ ನಡೆದ ತಾಲೂಕು ಪಂಚಾಯತ್ ವಿಶೇಷ ಸಭೆ ನಿರ್ಧರಿಸಿದೆ. ಆದರೆ ಅನಿವಾರ್ಯವಾದರೆ ಮಾತ್ರ ತಾಪಂ ವಾಣಿಜ್ಯ ಸಂಕೀರ್ಣ ತೆರವುಗೊಳಿಸುವುದಾಗಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಸಭಾಧ್ಯಕ್ಷತೆ ವಹಿಸಿದ್ದ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ. ಈ ಕಟ್ಟಡಕ್ಕೆ ಇದ್ದ ತಾತ್ಕಾಲಿಕ ತಡೆಯಾಜ್ಞೆ ಸರಕಾರಿ ಮಟ್ಟದಲ್ಲಿ ತೆರವುಗೊಂಡಿದೆ ಎಂದು ಸಭೆಯ ಗಮನಕ್ಕೆ ತಂದರು.

ಆಗ ಪ್ರತಿಕ್ರಿಯಿಸಿದ ವಿಪಕ್ಷ ಸದಸ್ಯ ರಮೇಶ್ ಕುಡ್ಮೇರು ಅವರು ಅಲ್ಲಿ ಬಸ್ ನಿಲ್ದಾಣ ಅಥವಾ ಇನ್ನಾವುದೇ ಅಭಿವೃದ್ದಿ ಕಾರ್ಯ ನಡೆಸುವುದಕ್ಕೆ ನಮ್ಮ ಅಭ್ಯಂತರವಿಲ್ಲ, ಈ ಹಿಂದಿನ ಸಭೆಯಲ್ಲೆ ಈ ಬಗ್ಗೆ ಎಲ್ಲಾ ಸದಸ್ಯರಿಗೆ ನೀಲನಕ್ಷೆ ಒದಗಿಸುವಂತೆ ಕೇಳಿಕೊಳ್ಳಲಾಗಿತ್ತು. ಆದರೆ ಅದು ಈ ವರೆಗೂ ಸಿಕ್ಕಿಲ್ಲ, ತಾಪಂ ಗೆ ಸಂಪನ್ಮೂಲ ಬರುವಂತ ಹೊಸ ಕಟ್ಟಡವನ್ನು ಉಳಿಸಿ ಹಳೇ ಕಟ್ಟಡ ತೆರವುಗೊಳಿಸಬೇಕೆ ಎಂದು ಪ್ರಶ್ನಿಸಿದರು.

ಜಾಹೀರಾತು

ಇದಕ್ಕೆ ದನಿಗೂಡಿಸಿದ ಸದಸ್ಯ ಯಶವಂತ ಪೊಳಲಿ, ನ್ಯಾಯಾಲಯದಲ್ಲಿ ತಾತ್ಕಾಲಿಕ ತಡೆಯಾಜ್ಞೆಯಷ್ಟೆ ತೆರವಾಗಿದೆ. ಇನ್ನು ಅಂತಿಮವಾಗಿಲ್ಲ, ಕಟ್ಟಡ ತೆರವುಗೊಳಿಸಿದರೂ, ಸ್ಥಳ ರಸ್ತೆ ಮಾರ್ಜಿನ್ ಗೆ ಹೋಗುವ ಸಾಧ್ಯತೆ ಇದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು, ಮಾ.31ರವರೆಗೆ ಹೊಸ ಕಟ್ಟಡದಲ್ಲಿರುವ ಬಾಡಿಗೆದಾರರಿಗೆ ಅವಕಾಶವಿದ್ದು, ಈಗಾಗಲೇ ಅವರೊಂದಿಗೆ ಮಾತುಕತೆಯನ್ನು ನಡೆಸಲಾಗಿದೆ. ಅದುವರೆಗೆ ಹೊಸ ಕಟ್ಟಡ ತೆರವುಗೊಳಿಸುವ ಪ್ರಶ್ನೆಯೇ ಇಲ್ಲ , ಅಗತ್ಯವಿದ್ದರೆ ಮಾತ್ರ ಆ ಕಟ್ಟಡ ತೆರವುಗೊಳಿಸಲಾಗುವುದು ಎಂದರು.

ಸದಸ್ಯ ಸಂಜೀವ ಪೂಜಾರಿ ಮದ್ಯಪ್ರವೇಶಿಸಿ ಒಮ್ಮೆ ಆಗಿರುವ ನಿರ್ಣಯವನ್ನು ಪದೇ ಪದೇ ಬದಲಾಯಿಸುವುದು ಸರಿಯಲ್ಲ ಎಂದರು. ಕಂದಾಯ ಇಲಾಖೆಯ ಸಹಕಾರದಿಂದ ಈ ಜಮೀನು ಲಭ್ಯವಾಗಿದ್ದು, ಸಿಕ್ಕಿರುವ ಅವಕಾಶವನ್ನು ಅಭಿವೃದ್ದಿಯ ದೃಷ್ಟಿಯಿಂದ ಸದುಪಯೋಗಪಡಿಸಿಕೊಳ್ಳುವ ಎಂದು ಉಪಾಧ್ಯಕ್ಷ ಅಬ್ಬಾಸ್ ಆಲಿ ಹೇಳಿದರು.

ತಾಪಂ ಹಳೇಕಟ್ಟಡವನ್ನು ಕೆಡವಿ ಅದರ ಪಕ್ಕಾಸು ಸಹಿತ ವಿವಿಧ ಸೊತ್ತುಗಳನ್ನು ಬಹಿರಂಗ ಹರಾಜು ಹಾಕಿ ವಿಲೇ ಮಾಡಲು ಹಾಗೂ ಪಕ್ಕದ ಹಳೆಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ಪತ್ರ ಬರೆಯಲು ತೀರ್ಮಾನಿಸಲಾಯಿತು.

2017-18 ನೇ ಸಾಲಿಗೆ ತಯಾರಿಸಲಾದ ಕ್ರಿಯಾಯೋಜನೆಯ ಕಾಮಗಾರಿಯನ್ನು ಫೆಬ್ರವರಿ 15 ರೊಳಗೆಪೂರ್ಣಗೊಳಿಸುವಂತೆ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರು ಸದಸ್ಯರಿಗೆ ಮನವಿ ಮಾಡಿದರು. ಜನಪ್ರತಿನಿಧಿಗಳು ವಿನಿವಿಧಾನಸೌಧದ ಒಳಗಡೆ ವಾಹನ ನಿಲುಗಡೆಗೆ ಅವಕಾಶವಿದೆ ಎಂದು ಸದಸ್ಯರೊಬ್ಬರ ಪ್ರಶ್ನೆಗೆ ತಹಶೀಲ್ದಾರ್‌ಪುರಂದರ ಹೆಗ್ಡೆ ಸ್ಪಷ್ಟಪಡಿಸಿದರು. ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ರವೀಂದ್ರ ಕಂಬಳಿ, ತುಂಗಪ್ಪ ಬಂಗೇರ, ಕಮಲಾಕ್ಷಿ ಪೂಜಾರಿ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಬಂಗೇರ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

12 hours ago