ಬಂಟ್ವಾಳ

12ರಂದು ಉಮ್ಮುಲ್ ಕುರಾ ತಹ್‌ಫೀಝುಲ್ ಕುರ್‌ಆನ್ ಮದ್ರಸದ ಉದ್ಘಾಟನಾ ಕಾರ್ಯಕ್ರಮ

ಪಾಣೆಮಂಗಳೂರು ಸಮೀಪದ ಬೋಳಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ “ಉಮ್ಮುಲ್ ಕುರಾ ತಹ್‌ಫೀಝುಲ್ ಕುರ್‌ಆನ್” ಮದ್ರಸದ ಉದ್ಘಾಟನಾ ಕಾರ್ಯಕ್ರಮ ಜ. 12ರಂದು ಸಂಜೆ ೪ಕ್ಕೆ ಮದ್ರಸದ ವಠಾರದಲ್ಲಿ ನಡೆಯಲಿದೆ ಎಂದು ಮರ್ಹೂಮ್ ಪಿ.ಬಿ. ಹುಸೈನಬ್ಬ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಅಬ್ದುಲ್ ಅಝೀಝ್ ಹೇಳಿದ್ದಾರೆ.

ಜಾಹೀರಾತು

ಬುಧವಾರ ಸಂಜೆ ಬಂಟ್ವಾಳ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.ಇ.ಹಿಂದ್ ಮಂಗಳೂರು ವಲಯದ ಸಂಚಾಲಕ ಅಕ್ಬರ್‌ಅಲಿ ಉಡುಪಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಸಚಿವ ಯು.ಟಿ.ಖಾದರ್, ಎಸ್ಕೆಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ, ಹಂಪನಕಟ್ಟೆ ಮಸೀದಿಯ ಖತೀಬ್ ಯೂಸುಫ್ ಮೌಲವಿ, ಇಮಾಮ್ ಕೌನ್ಸಿಲ್‌ನ ಅಧ್ಯಕ್ಷ ಜಾಫರ್ ಸಾದಿಕ್, ಅಳೇಕಲ ಮಸೀದಿಯ ಖತೀಬ್ ಮುಸ್ತಫಾ ದಾರಿಮಿ, ತೊಕ್ಕೊಟ್ಟು ಮಸೀದಿಯ ಖತೀಬ್ ಮುಹಮ್ಮದ್ ಕುಂಞಿ, ಪಿಡಬ್ಲ್ಯೂಡಿ ಕಂಟ್ರಾಕ್ಟರ್ ಪಿ.ಬಿ. ಇಬ್ರಾಹೀಂ, ಮಂಗಳೂರು ಇಕ್ರಾ ಅರೆಬಿಕ್ ಕಾಲೇಜಿನ ಪ್ರಾಂಶುಪಾಲ ಸಾಲಿಮ್ ನದ್ವಿ, ಬೋಳಂಗಡಿ ಮಸೀದಿಯ ಖತೀಬ್ ಯಹ್ಯಾ ತಂಙಳ್ ಹಾಗು ಜ.ಇ.ಹಿ. ಸಂಚಾಲಕ ಅಮೀನ್ ಅಹ್ಸನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಸಂಜೆ 7ಕ್ಕೆ “ಕುರ್‌ಆನ್ ಶಾಂತಿಗಾಗಿ” ಎಂಬ ಶೀರ್ಷಿಕೆಯಲ್ಲಿ ಕನ್ನಡ ಹಾಗೂ ಬ್ಯಾರಿ ಭಾಷೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಲಿದ್ದು, ಬಿ.ಎ. ಮುಹಮ್ಮದ್ ಅಲಿ ಅವರು ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮರ್ಹೂಮ್ ಪಿ.ಬಿ. ಹುಸೈನಬ್ಬ, ಚಾರಿಟೇಬಲ್ ಟ್ರಸ್ಟಿ ಡಿ.ಕೆ. ಇಬ್ರಾಹಿಂ, ಕಾರ್ಯದರ್ಶಿ ಸಲೀಂ ಬೋಳಂಗಡಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ