ಬಂಟ್ವಾಳಕ್ಕೆ ಲಯನ್ಸ್ ಗವರ್ನರ್ ಅಧಿಕೃತ ಭೇಟಿ


ಲಯನ್ಸ್ ಮತ್ತು ಲಯನೆಸ್ ಕ್ಲಬ್‌ಗೆ ಲಯನ್ ಜಿಲ್ಲಾ ಗವರ್ನರ್ ಎಚ್.ಆರ್.ಹರೀಶ್ ಅಧಿಕೃತ ಭೇಟಿ ಕಾರ್ಯಕ್ರಮ ಬಂಟ್ವಾಳ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.

ಜಾಹೀರಾತು


ತೊಡಂಬಿಲ ಸೇಕ್ರೆಟ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕಣ್ಣು ತಪಾಸಣಾ ಶಿಬಿರ, ಬೆಂಜನಪದವಿನ ಸರಕಾರಿ ಪದವಿಪೂರ್ವ ಕಾಲೇಜು ಹೈಸ್ಕೂಲು ವಿಭಾಗದಲ್ಲಿ ಕಲೆ ಮತ್ತು ವೃತ್ತಿಶಿಕ್ಷಣದ ಕೊಠಡಿ ಉದ್ಘಾಟನೆ, ಪ್ರೊಜೆಕ್ಟರ್ ಕೊಡುಗೆ ಒದಗಿಸಲಾಯಿತು. ಬೆಂಜನಪದವಿನ ದ.ಕ.ಜಿಪಂ ಹಿ.ಪ್ರಾ.ಶಾಲೆಯಲ್ಲಿ ಕಂಪ್ಯೂಟರ್ ಮತ್ತು ಜೆರಾಕ್ಸ್ ಮಿಷಿನ್ ಕೊಡುಗೆ, ಬಂಟ್ವಾಳ ಎಸ್.ವಿ.ಎಸ್.ವಿದ್ಯಾಗಿರಿಯಲ್ಲಿ ಶೈಕ್ಷಣಿಕ ಕಾರ್ಯಾಗಾರ, ಲಯನ್ಸ್ ಸೇವಾ ಮಂದಿರದ ನಿರ್ಮಲ ಹೃದಯದ ವಿಕಲ ಚೇತನ ಮಕ್ಕಳೊಂದಿಗೆ ಸ್ನೇಹ ಮಿಲನ ಕಾರ್ಯಕ್ರಮ ನಡೆಸಲಾಯಿತು.

ಕ್ಲಬ್ ಎರಡನೇ ಉಪಾಧ್ಯಕ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿಕೊಡಮಾಡಿದ ರಂಗೇಲು ಅಂಗನವಾಡಿ ಕೇಂದ್ರದ ಮೇಲ್ಚಾವಣಿ, ಇಂಟರ್‌ಲಾಕ್ ಹಾಗೂ ಆವರಣಗೋಡೆ ಮತ್ತುಧ್ವಜಸ್ತಂಭವನ್ನು ಉದ್ಗಾಟಿಸಿ ಹಸ್ತಾಂತರಿಸಲಾಯಿತು.

ಬಳಿಕ ಲಯನ್ಸ್ ಸೇವಾ ಮಂದಿರದಲ್ಲಿ ಸ್ನೇಹ ಮಿಲನ ಕಾರ್ಯಕ್ರಮದ ಮೂಲಕ ರಾಜ್ಯಪಾಲರ ಅಧಿಕೃತ ಭೇಟಿಯು ಸಂಪನ್ನಗೊಂಡಿತು.
ಕಾರ್ಯಕ್ರಮದ ಅಧ್ಯಕ್ಷರಾದ ಜಗದೀಶ ಎಡಪಾಡಿತ್ತಾಯ ಸ್ವಾಗತಿಸಿದರು. ಗವರ್‍ನರ್ ಎಚ್. ಆರ್. ಹರೀಶ್ ಜಿಲ್ಲಾ ಮಟ್ಟದಲ್ಲಿ ಮುಂಚೂಣಿಯಲ್ಲಿರುವ ಬಂಟ್ವಾಳ ಕ್ಲಬ್‌ನ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.

ಜಾಹೀರಾತು

ಕಾರ್ಯಕ್ರಮದಲ್ಲಿ ವೀಲ್‌ಚೈಯರ್, ಜೆರೋಕ್ಸ್ ಮೆಶಿನ್, ಮನೆಕಟ್ಟಲು ಆಥಿಕ ಸಹಾಯ ಹಾಗೂ ಹಲವು ಸೇವೆಗಳನ್ನು ಒದಗಿಸಲಾಯಿತು.
ಉಪಗವರ್‍ನರ್ ದೇವದಾಸ ಭಂಡಾರಿ, ಸಂಪುಟ ಕಾರ್ಯದರ್ಶಿ ವಸಂತಕುಮಾರ್ ಶೆಟ್ಟಿ, ಜಿ ಆರ್‌ಆರ್ ಲೊಕೇಶ್ ಬೊಳಾರ್ ಪ್ರಾಂತ್ಯಾಧಕ್ಷ ನರಸಿಂಹ ಶೆಟ್ಟಿ ವಲಯಾಧ್ಯಕ್ಷ ಶಿವಾನಂದ ಬಾಳಿಗಾ ಲಯನೆಸ್ ಅಧ್ಯಕ್ಷರಾದ ಚಿತ್ರಾಎಡಪಾಡಿತ್ತಾಯ ಕಾರ್ಯದರ್ಶಿಗಳಾದ ರಾಮಕೃಷ್ಣರಾವ್ ಹಾಗೂ ಸುಜಾತಾ ರವಿಶಂಕರ್. ಕೋಶಾಧಿಕಾರಿಗಳಾದ ರೋಹಿತಾಶ್ವ ಹಾಗೂ ವಸಂತಿಎಲ್. ಶೆಟ್ಟಿ ಉಪಸ್ಥಿತರಿದ್ದರು.

ಹೊಸ ಸದ್ಯಸರು ಮಾಹಿತಿಯನ್ನು ಮಾಜಿ ವಲಯಾಧ್ಯಕ್ಷ ಜಯಂತ್ ಶೆಟ್ಟಿ ವಾಚಿಸಿದರು. ಉಪಾಧ್ಯಕ್ಷ ಸುಧಾಕರ್‌ಆಚಾರ್ಯ ವಂದಿಸಿದರು. ದಾಮೊದರ್ ಹಾಗೂ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳಕ್ಕೆ ಲಯನ್ಸ್ ಗವರ್ನರ್ ಅಧಿಕೃತ ಭೇಟಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*