ಬಂಟ್ವಾಳ

ಬಂಟ್ವಾಳ ಎಸ್.ವಿ.ಎಸ್. ಕಾಲೇಜುಗಳ ಸುವರ್ಣ ಮಹೋತ್ಸವ ಪ್ರತಿಭಾ ದಿನಾಚರಣೆ

  • ಸಮಾಜಕ್ಕೆ ಪೂರಕವಾಗಿ ವ್ಯಕ್ತಿತ್ವ ನಿರ್ಮಾಣ: ರವಿ ಶೆಟ್ಟಿ

ಬದುಕು ಕೇವಲ ಜೀವನ ನಿರ್ವಹಣೆಗೆ ಸೀಮಿತವಾದುದಲ್ಲ. ಪ್ರತಿಯೊಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಸಾಧನೆಯ ಮೂಲಕ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕು. ವ್ಯಕ್ತಿತ್ವವು ಸಮಾಜಕ್ಕೆ ಪೂರಕವಾಗಿರಬೇಕು. ಆ ಮೂಲಕ ಮಾನವ ಸಮುದಾಯಕ್ಕೆ ಪ್ರತಿಯೊಬ್ಬನೂ ತನ್ನದೇ ಆದ ಕೊಡುಗೆ ನೀಡುವಂತಾಗಬೇಕು ಎಂದು ಕತಾರಿನ ತುಳುಕೂಟದ ಅಧ್ಯಕ್ಷರೂ, ಯಶಸ್ವಿ ಉದ್ಯಮಿಯೂ ಆದ ಶ್ರೀ ಎಂ ರವಿ ಶೆಟ್ಟಿ ಹೇಳಿದರು.

ಜಾಹೀರಾತು

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾವಿ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಸುವರ್ಣ ಮಹೋತ್ಸವದ ಸಂಭ್ರಮಾವಸರದಲ್ಲಿ ನಡೆದ ಪ್ರತಿಭಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

ಇನ್ನೋರ್ವ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕೇರಳದ ಕೊಚ್ಚಿನ್‌ನ ಪ್ರಾಧ್ಯಾಪಕರಾದ ಡಾ| ಎನ್ ಬಾಲಕೃಷ್ಣರವರು ಮಾತನಾಡಿ ಶಿಕ್ಷಣ ಸಂಸ್ಥೆಯೊಂದು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸುವ ದೇಗುಲ. ವಿದ್ಯಾಲಯಗಳಲ್ಲಿರುವ ಶಿಕ್ಷಕ ವೃಂದವು ಅಂತಹ ವಿದ್ಯಾರ್ಥಿಗಳಿಗೆ ಮೂಲ ಪ್ರೇರಣೆ. ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದ ಪ್ರಮುಖ ಕರ್ತೃಗಳು ಶಿಕ್ಷಕರು. ಹಳ್ಳಿಯ ಪರಿಸರದ ವಿದ್ಯಾರ್ಥಿಯಾದ ನಾನು ಈ ಎತ್ತರಕ್ಕೆ ಬೆಳೆಯುವಲ್ಲಿ ಸುವರ್ಣ ಮಹೋತ್ಸವ ಆಚರಿಸುತ್ತಿರುವ ಈ ಸಂಸ್ಥೆಯು ಕಾರಣ ಎಂದು ಹೇಳಿದರು.

ಶ್ರೀ ವೆಂಕಟರಮಣ ಸ್ವಾಮಿ ಕಾಲೇಜುಗಳ ಸಂಚಾಲಕರಾದ ಕೂಡಿಗೆ ಪ್ರಕಾಶ್ ಶೆಣೈ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜು ಸುವರ್ಣ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ವಿದ್ಯಾರ್ಥಿಗಳ ಮತ್ತು ವಿವಿಧ ಇಲಾಖೆಗಳ ಬೃಹತ್ ವಸ್ತುಪ್ರದರ್ಶನವನ್ನು ಈ ಸಂದರ್ಭದಲ್ಲಿ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ಹಲವಾರು ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಪದವಿ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಜಗದೀಶ್ ಹೊಳ್ಳ ಮತ್ತು ಪದವಿ ಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ವೇದಾನಂದ ಕಾರಂತ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್ ಪ್ರಾಸ್ತಾವಿಕ ಮಾತುಗಳೊಂದಿಗೆ  ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಕೆ ವಂದಿಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ತುಕಾರಾಂ ಪೂಜಾರಿ ಮತ್ತು ಐಕ್ಯೂಎಸಿ ಸಂಯೋಜಕರಾದ ಡಾ| ಟಿ.ಕೆ ರವೀಂದ್ರನ್ ಮುಖ್ಯ ಅತಿಥಿಗಳ ಪರಿಚಯವನ್ನು ಮಾಡಿದರು. ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಝೀನಾ ಕುವೆಲ್ಲೊ ಮತ್ತು  ಉಪನ್ಯಾಸಕಿಯಾದ ಶಾಲಿನಿ ಬಿ ಬಹುಮಾನ ವಿತರಣಾ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿ ಸುದರ್ಶನ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಾದ ಭರತ್ ಕುಮಾರ್, ಸಂಜಯ್ ಶೆಣೈ ಮತ್ತು ವಿಕಾಸ್ ಪ್ರಾರ್ಥಿಸಿದರು. ಸಭಾ ಕಾರ್ಯಕ್ರಮದ ನಂತರ ಮಂಗಳೂರು ಮೆಲೋಡಿಯಸ್ ತಂಡದವರಿಂದ ಮತ್ತು ಕಾಲೇಜಿನ ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

5 hours ago