ಬಂಟ್ವಾಳ

ಸೀತಾರಾಮ ಕಲ್ಯಾಣೋತ್ಸವ ಆಮಂತ್ರಣ ಬಿಡುಗಡೆ, ಸಮಾಲೋಚನಾ ಸಭೆ

www.bantwalnews.com

ಜಾಹೀರಾತು

ಶ್ರೀ ರಾಮ ಕ್ಷೇತ್ರ ಸೇವಾ ಸಮಿತಿ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಫೆ.18 ರಂದು ರವಿವಾರ ಬಿ.ಸಿ.ರೋಡಿನ ಗಾಣದ ಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಬಳಿ ಲೋಕಕಲ್ಯಾಣಾರ್ಥವಾಗಿ ನಡೆಯಲಿರುವ ಸೀತಾರಾಮ ಕಲ್ಯಾಣೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಕ್ಷೇತ್ರದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಬಿಡುಗಡೆಗೊಳಿಸಿದರು.

ಅವರು ಆಶೀರ್ವಚನ ನೀಡಿ ಸತ್ಯ, ಧರ್ಮವನ್ನು ಸಂತರು ಪಾಲಿಸಿ ಜನರ ಮೂಲಕ ಅನುಷ್ಠಾನಗೊಳಿಸಿದಾಗ ಸಮಾಜದಲ್ಲಿ ಶಾಂತಿ, ಸೌಹಾರ್ದತೆ  ತರಲು ಸಾಧ್ಯ ವಿದೆ ಎಂದರು. ಡಿಗ್ರಿ ಪಡೆದ ತಕ್ಷಣ ವ್ಯಕ್ತಿ ಅಕ್ಷರಸ್ಥನಾಗುತ್ತಾನೆ ಹೊರತು ವಿದ್ಯಾವಂತನಾಗುವುದಿಲ್ಲ. ಬದುಕಿನಲ್ಲಿ ಸಂಸ್ಕಾರ ಇಲ್ಲದೇ ಹೋದರೆ ಎಷ್ಟೇ ಉನ್ನತ ಸ್ಥಾನ ಪಡೆದರೂ ನಿಷ್ಪ್ರಯೋಜಕ ಎಂದು ತಿಳಿಸಿದರು.

ಈ ಸಂದರ್ಭ ಬಂಟ್ವಾಳ ಸೇವಾ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಸಾಲ್ಯಾನ್ ನರಿಕೊಂಬು, ಕನ್ಯಾಡಿ ಕ್ಷೇತ್ರದ ಸಂಚಾಲಕ ಕೃಷ್ಣಪ್ಪ ಪೂಜಾರಿ ಸಮಿತಿ ಪ್ರಮುಖರಾದ ರುಕ್ಮಯ ಪೂಜಾರಿ, ಬೇಬಿ ಕುಂದರ್, ಮಾಯಿಲಪ್ಪ ಸಾಲ್ಯಾನ್, ವಿಶ್ವನಾಥ ಫೂಜಾರಿ, ರಾಮದಾಸ ಬಂಟ್ವಾಳ, ಬಿ.ಮೋಹನ್, ಗೋಪಾಲ ಸುವರ್ಣ, ಗಣೇಶ್ ಸುವರ್ಣ, ಜಗದೀಶ ಕೊಯಿಲಾ, ಗೋಪಾಲ ಅಂಚನ್, ಜಯಾನಂದ ಪೆರಾಜೆ, ಮೋನಪ್ಪ ದೇವಸ್ಯ, ಲೋಕೇಶ್,  ದೇವಪ್ಪ ಪೂಜಾರಿ, ಗಣೇಶ್, ನಾರಾಯಣ ಸಾಲ್ಯಾನ್, ರಮೇಶ್ ಎಂ., ಸುಂದರ ಕೃಷ್ಣಕೋಡಿ, ಉದಯ ಕುಮಾರ್, ಪ್ರವೀಣ್ ಕುಮಾರ್, ಪ್ರಸಾದ್ ಕರ್ಬೆಟ್ಟು, ದಿವಾಕರ ಪೂಜಾರಿ , ನಿತಿನ್ ಮತ್ತಿತರರು ಹಾಜರಿದ್ದರು. ಬಳಿಕ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಚರ್ಚಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ