ಬಂಟ್ವಾಳ

ಸರಕಾರಿ ರಜಾದಿನ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದ ಸಿಬ್ಬಂದಿ

ಜಾಹೀರಾತು

ಎರಡನೇ ಶನಿವಾರ ಸರಕಾರಿ ಕಚೇರಿಗಳಿಗೆ ರಜೆ. ಅದರಲ್ಲೂ ಭಾನುವಾರ, ಸೋಮವಾರ ಡಬ್ಬಲ್ ರಜೆ. ಹೀಗಾಗಿ ಸರಕಾರಿ ನೌಕರರು ತಿರುಗಾಟಕ್ಕೆ ಹೋಗುವುದು ಮಾಮೂಲು. ಆದರೆ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿರುವ ತಾಲೂಕು ಕಚೇರಿ ಸಹಿತ ಕಂದಾಯ ಇಲಾಖೆಯ ಎಲ್ಲ ಸಿಬ್ಬಂದಿಗಳು ಮೇಲಧಿಕಾರಿ, ಡಿ ದರ್ಜೆ ಎಂಬ ಬೇಧವಿಲ್ಲದೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದು ವಿಶೇಷ.

ಸದಾ ಫೈಲು ಹಿಡಿಯುವ ಕೈಯಲ್ಲಿ ಹಿಡಿಸೂಡಿ, ಬಕೇಟ್, ಮೋಪ್ ಹಿಡಿದು ಕಚೇರಿ ವಠಾರ ಶುಚಿಗೊಳಿಸುತ್ತಿದ್ದ ಸಿಬ್ಬಂದಿ ಶನಿವಾರ ಕಂಡುಬಂದರು. ಆಡಳಿತ ಶಾಖೆಯ ಸೀತಾರಾಂ ಕಮ್ಮಾಜೆ ನೇತೃತ್ವದಲ್ಲಿ ಆಡಳಿತ ಶಾಖೆ, ಚುನಾವಣಾ ಶಾಖೆ, ಆಹಾರ ಶಾಖೆ, ಭೂ ಸುಧಾರಣೆ ಶಾಖೆ, ನಾಡಕಚೇರಿ ಮತ್ತಿತರ ವಿಭಾಗಗಳ ನೌಕರರು ಸ್ವಚ್ಚತಾ ಕಾರ್ಯ ನಿರ್ವಹಿಸಿದರು.

ಅಧಿಕಾರಿಗಳು ಹಾಗೂ ನೌಕರರ ಈ ಸ್ವಚ್ಚತಾ ಆಂದೋಲನಕ್ಕೆ ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಮೆಚ್ಚುಗೆ ವ್ಯಕ್ತ ಪಡಿಸಿದ್ದು, ಇದೊಂದು ಮಾದರಿ ಕಾರ್ಯಕ್ರಮ. ಎಲ್ಲಾ ಇಲಾಖಾ ಇಲಾಖಾ ಕಚೇರಿಗಳಲ್ಲಿ ಸ್ವಚ್ಚತಾ ಕಾರ್ಯ ನಡೆಯಬೇಕೆಂದು ಕರೆ ನೀಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ