ಬಂಟ್ವಾಳ

ಸ್ವಚ್ಛತೆಯ ಪಾಠದೊಂದಿಗೆ ಮೂರನೇ ದಿನಕ್ಕೆ ಕಾಲಿಟ್ಟ ಬಿಜೆಪಿ ನಡಿಗೆ

ಬಿಜೆಪಿ ಪ್ರಮುಖರಾದ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರ ನೇತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ಪಾದಯಾತ್ರೆ ರಾಯಿ ದಾಮೋದರ ಪೂಜಾರಿ ಮನೆಯಿಂದ ಮಂಗಳವಾರ ಆರಂಭಗೊಂಡಿತು.

ಜಾಹೀರಾತು

ಕೇತ್ರೋಡಿ ಕ್ವಾರ್ಟಸ್ ರಸ್ತೆಯಲ್ಲಿ ಪಂಜಿಕಲ್ಲಿನ ಬಾಲೇಶ್ವರ ಗರೋಡಿ ಬಳಿ ಸೇರಿದ್ದ ಪಂಜಿಕಲ್ಲಿನ ಬಿಜೆಪಿ ಕಾರ್ಯಕರ್ತರು ಯಾತ್ರೆಯನ್ನು ಸ್ವಾಗತಿಸಿದರು.

ನಿಂಗಲ್ ಬಾಕಿಮಾರುವಿನಲ್ಲಿನ ಮೈದಾನದಲ್ಲಿ ಕಸದ ಕೊಂಪೆಯನ್ನು ಕಂಡ ಯಾತ್ರೆಯಲ್ಲಿ ಪಾಲ್ಗೊಂಡ ಕಾರ್ಯಕರ್ತರು, ಅದನ್ನು ಸ್ವಚ್ಛ ಮಾಡಿದರು. ಈ ಮೂಲಕ ಪ್ರಧಾನಿ ಮೋದಿ ಅವರ ಸ್ವಚ್ಛ ಭಾರತ ಆಶಯವನ್ನು ಕಾರ್ಯರೂಪಕ್ಕಿಳಿಸಿದರು.

ನಂತರ ಪಾದಯಾತ್ರೆಯು ದಂಡೆಗೋಳಿ ಮೂಲಕ ಚೆನ್ನೈತ್ತೋಡಿಗ್ರಾಮದ ವಾಮದಪದವು ಪೇಟೆತಲುಪಿತು ಈ ಸಂದರ್ಭದಲ್ಲಿ ಚೆನ್ನೈತ್ತೋಡಿಯ ಬಿಜೆಪಿ ವತಿಯಂದ ಸ್ವಾಗತ ನಡೆಯಿತು. ಮಹಿಳಾ ಕಾರ್‍ಯಕರ್ತರುಆರತಿಎತ್ತಿ ಸ್ವಾಗತಿಸಿದರು. ನಂತರ ಗಣೇಶ ಮಂದಿರದಲ್ಲಿ ಮದ್ಯಾಹ್ನದ ಭೋಜನ ವ್ಯವಸ್ಥೆಯನ್ನು ಮುಗಿಸಿಕೊಂಡು ಯಾತ್ರೆಯು ಕೊಡಂಬೆಟ್ಟು ಮೂಲಕ ಕಾವಳಪಡೂರಿಗೆ ಸಾಗಿತು.

ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ದೇವದಾಸ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ , ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನಾ ಜಿ.ಕೆ ಭಟ್, ಜಿ.ಪಂ ಸದಸ್ಯರಾದತುಂಗಪ್ಪ ಬಂಗೇರಾ, ಕಮಾಲಕ್ಷಿ ಪೂಜಾರಿ, ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ, ಕ್ಷೇತ್ರ ಉಪಾಧ್ಯಕ್ಷರಾದ ವಿಜಯ ರೈ , ಕಾರ್ಯದರ್ಶಿಗಳಾದ ಸೀತರಾಮ ಪೂಜಾರಿ, ರಮಾನಾಥ ರಾಯಿ, ಗಣೇಶ್‌ ರೈಮಾಣಿ, ಎಸ್.ಸಿ ಮೊರ್ಚಾ ಜಿಲ್ಲಾಧ್ಯಕ್ಷರಾದ ದಿನೇಶ್‌ ಅಮ್ಟೂರು, ಜಿಲ್ಲಾ ಸಮಿತಿ ಸದಸ್ಯರಾದ ರೋನಾಲ್ಡ್ ಡಿ ಸೋಜಾ, ಜೋಕಿಂ ಮಿನೆಜಸ್, ರಾಜ್ಯ ಯುವ ಮೋರ್ಚಾ ಸದಸ್ಯ ಪೃಥ್ವಿರಾಜ್ ಬಂಗೇರಾ, ಶಕ್ತಿ ಕೇಂದ್ರ ಅಧ್ಯಕ್ಷರಾದ ರತ್ನಕುಮಾರ್‌ ಚೌಟ, ಪ್ರಧಾನ ಕಾರ್ಯದರ್ಶಿ ಸಂಜೀವ ಪೂಜಾರಿ, ರೈತ ಮೋರ್ಚಾ ಅಧ್ಯಕ್ಷರಾದ ತನಿಯಪ್ಪಗೌಡ , ಪ್ರ.ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ ಬಾರೆಕ್ಕಿನಡೆ, ಹಿಂದುಳಿವರ್ಗದ ಅಧ್ಯಕ್ಷರಾದ ವಸಂತ ಅಣ್ಣಳಿಕೆ, ಪ್ರ.ಕಾರ್ಯದರ್ಶಿ ಹರೀಶ್‌ರಾಯಿ, ಬಂ.ವ್ಯ.ಸೇ.ಸ ನಿರ್ದೇಶಕರಾದ ಕರುಣೇಂದ್ರ ಪೂಜಾರಿ, ಕೆ.ಎನ್ ಶೇಖರ್, ಯುವಮೋರ್ಚಾದ ಸಂತೋಷ್‌ ರಾಯಿ, ದಿನೇಶ್ ಶೆಟ್ಟಿ ದಂಬೆದಾರು, ಮೋಹನದಾಸ್, ಸಂಪತ್‌ ಕೋಟ್ಯಾನ್, ರಾಜೇಂದ್ರ, ರಾಯಿ ಪಂಚಾಯತ್‌ಅಧ್ಯಕ್ಷರಾದ ದಯಾನಂದ ಸಫಲ್ಯ, ಪಂಜಿಕಲ್ಲು ಪಂಚಾಯತ್‌ಉಪಾಧ್ಯಕ್ಷರಾದ ಲಕ್ಷ್ಮಣ್‌ಗೌಡ, ರಾಯಿ, ಪಂಜಿಕಲ್ಲು, ಚೆನ್ನೈತ್ತೋಡಿ  ಪಂಚಾಯತ್ ಸಮಿತಿ ಅಧ್ಯಕ್ಷರುಗಳಾದ ಪರಮೇಶ್ವರ ಪೂಜಾರಿ, ಚಿದಾನಂದ ಕುಲಾಲ್, ಜಯರಾಮ ಶೆಟ್ಟಿ ಕಾಪು, ಮಹಿಳಾ ಮೋರ್ಚಾದ ಸದಸ್ಯರುಗಳಾದ ವಿನುತಾ ಸಫಲ್ಯ,ರೇಣುಕಾ ರೈ,ಗುಣವತಿ,ನಳಿಣಾಕ್ಷಿ ಶೆಟ್ಟಿ, ಪಂಚಾಯತ್ ಸದಸ್ಯರಾದಹರೀಶ್ ಪೂಜಾರಿ, ಬಾಲಕೃಷ್ಣ ಪೂಜಾರಿ, ಸುಮತಿ,ಶಾಲಿನಿ,ರೂಪ,ಹರೀಣಾಕ್ಷಿ, ಮೋಹನ್‌ದಾಸ್‌ಗಟ್ಟಿ, ಪೂವಪ್ಪ ಮೆಂಡನ್ , ಪಕ್ಷದ ಪ್ರಮುಖರುಗಳಾದ ಪ್ರಕಾಶ್‌ಅಂಚನ್, ಗೋಪಾಲಕೃಷ್ಣ ಚೌಟ, ಪುಷ್ಪರಾಜಚೌಟ, ಕೃಷ್ಣಪ್ಪಗೌಡ,ವಿನೋದ್ ಪೂಜಾರಿ, ಶ್ಯಾಮಪ್ರಸಾದ್ ಪೂಂಜಾ ,ಯಶೋಧರ ಶೆಟ್ಟಿ, ಪ್ರಕಾಶ್ ಶೆಟ್ಟಿ ಆಲಕ್ಕಿ, ರೂಪೇಶ್ ಪೂಜಾರಿ, ಉಮೇಶ್‌ಗೌಡ,ರವೀಂದ್ರ ಪೂಜಾರಿ ಬದನಡಿ,ಗಂಗಾಧರ ಪಿಲ್ಕಾಜೆ, ವಸಂತಗೌಡ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts