ಕಲ್ಲಡ್ಕ

ಒಗ್ಗಟ್ಟಾಗದಿದ್ದರೆ ನಿರಂತರ ಆಕ್ರಮಣ: ಮಾಣಿಲ ಸ್ವಾಮೀಜಿ

ಹಿಂದುಗಳು ಒಗ್ಗಟ್ಟಾಗದಿದ್ದಲ್ಲಿ ಆಕ್ರಮಣ ನಿರಂತರವಾಗಿ ನಡೆಯುತ್ತವೆ ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಕಲ್ಲಡ್ಕ ಶ್ರೀರಾಮ ಮಂದಿರ ವಾರ್ಷಿಕೋತ್ಸವ ಮಕರ ಸಂಕ್ರಮಣ ದಿನ ಶ್ರೀರಾಮಾಂಜನೇಯ ಸೇವಾ ಟ್ರಸ್ಟ್ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಮಾಣಿಲ ಶ್ರೀಗಳು, ಸರ್ಕಾರ ಮಾಡಬೇಕಾದ ಕೆಲಸ ಶ್ರೀರಾಮ ವಿದ್ಯಾಕೇಂದ್ರ ಮಾಡುತ್ತಾ ಬಂದಿದೆ. ಅದೆಷ್ಟೋ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಸಮವಸ್ತ್ರ, ಭೋಜನ ನೀಡುತ್ತಾ ಬಂದಿದೆ. ಈ ನೆಲದಲ್ಲಿ ಶ್ರೀರಾಮನ ಶಕ್ತಿ, ಹನುಮಂತನ ಶಕ್ತಿ ಖಂಡಿತಾ ಇದೆ ಇವರ ಶಕ್ತಿಯಿಂದಲೇ ಈ ಕ್ಷೇತ್ರದಲ್ಲಿ ರಾಮನ ಮಂದಿರ ನಿರ್ಮಾಣವಾಗಲು ಸಾಧ್ಯವಾಯಿತು ಶ್ರೀರಾಮನ, ಹನುಮಂತನ ಶಕ್ತಿಯಿಂದ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗಲಿಲ್ಲ ಇನ್ನೂ ಆಗುವುದಿಲ್ಲ ಎಂದರು.

ಬೆಳಿಗ್ಗೆ ಗಣಹೋಮ ಹಾಗೂ ಸಂಜೆ ಸಾರ್ವಜನಿಕ ಸತ್ಯನಾರಾಯಣ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಮಂದಿರ ಅಧ್ಯಕ್ಷ ಚೆನ್ನಪ್ಪ ಆರ್ ಕೋಟ್ಯಾನ್ ಸ್ವಾಗತಿಸಿ, ಕಾರ್‍ಯದರ್ಶಿ ಕ. ಕೃಷ್ಣಪ್ಪ ವಂದಿಸಿ, ರಾಜೇಶ್ ಕೊಟ್ಟಾರಿ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ