ಬಂಟ್ವಾಳ

ಎನ್‌ಪಿಎಸ್ ನೌಕರರ ಸಂಘದಿಂದ ಪ್ರತಿಭಟನೆ, ಮನವಿ ಸಲ್ಲಿಕೆ

ಜಾಹೀರಾತು

ಅವೈಜ್ಞಾನಿಕ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್)ಯನ್ನು ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಜ. 20ರಂದು ಬೆಳಿಗ್ಗೆ 10ಕ್ಕೆ ಬೆಂಗಳೂರಿನಲ್ಲಿ “ಫ್ರೀಡಂ ಪಾರ್ಕ್ ಚಲೋ” ಒಂದು ದಿನದ ಉಪವಾಸ ಧರಣಿ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ಗುರುವಾರ ನಡೆಯಿತು.

ಬಳಿಕ ತಹಶೀಲ್ದಾರ್ ಪುರಂದರ ಹೆಗ್ಡೆ ಮೂಲಕ ಮನವಿ ಸಲ್ಲಿಸಲಾಯಿತು.ಎನ್‌ಸಿಪಿ ಸರಕಾರಿ ನೌಕರರ ವೇತನದಲ್ಲಿ ಶೇ.೧೦ರಷ್ಟು ಕಡಿತಗೊಳಿಸಿ ಖಾಸಗಿ ಶೇರು ಮಾರುಕಟ್ಟೆಯಲ್ಲಿ ಹೂಡಲಾಗುತ್ತಿದೆ. ಇದರಿಂದಾಗಿ ನೌಕರರಲ್ಲಿ ಅಭದ್ರತೆ ಹಾಗೂ ಅನಿಶ್ಚಿತತೆ ಉಂಟಾಗಿದೆ. ಇದರಿಂದ ರಾಜ್ಯದಲ್ಲಿ ೧.೮೦ ಲಕ್ಷ ಸರಕಾರಿ ನೌಕರರು ಸೇವಾ ನಿವೃತ್ತಿಯ ಸಂದರ್ಭ ಪಿಂಚಣಿ ಮತ್ತು ಇತರ ಸವಲತ್ತುಗಳಿಂದ ವಂಚಿತರಾಗಿ ಸಾಮಾನ್ಯ ಅನ್ಯಾಯಕ್ಕೆ ತುತ್ತಾಗಲಿದ್ದಾರೆ ಎಂದು ಸರಕಾರಿ ನೌಕರರ ಸ:ಂಘದ ತಾಲೂಕು ಘಟಕ ಅಧ್ಯಕ್ಷ ಉಮಾನಾಥ ರೈ ಮೇರಾವು ಈ ಸಂದರ್ಭ ಹೇಳಿದರು.

ಕರ್ನಾಟಕ ರಾಜ್ಯ ಸರಕಾರಿ ಎನ್‌ಪಿಎಸ್ ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಸಂತೋಷ್ ಕುಮಾರ್ ತುಂಬೆ, ಗೌರವ ಸಲಹೆಗಾರರಾದ ಕೆ.ರಮೇಶ್ ನಾಯಕ್ ರಾಯಿ, ಶಿವಪ್ರಸಾದ್ ಶೆಟ್ಟಿ, ಜಯರಾಮ, ಜೋಯೆಲ್ ಲೋಬೊ, ಕಾರ್ಯದರ್ಶಿ ಗುರುಮೂರ್ತಿ, ತಾಲೂಕು ಸಂಚಾಲಕ ಅವಿನಾಶ, ಉಪಾಧ್ಯಕ್ಷ ಯಮುನಪ್ಪ, ನೀತಾ ಗಟ್ಟಿ, ಕೋಶಾಧಿಕಾರಿ ಶಿವರಾಮ, ಬಸಯ್ಯ ಆಲಮಟ್ಟಿ, ಬಸವರಾಜ್, ಸರಕಾರಿ ನೌಕರರ ಸಂಘದ ತಾಲೂಕು ಖಜಾಂಚಿ ಜೆ.ಜನಾರ್ದನ, ಉಪಾಧ್ಯಕ್ಷರಾದ ಸುನಂದಾ ಕೆ.ಪಿ, ಹರಿಪ್ರಸಾದ್ ಶೆಟ್ಟಿ, ನವೀನ್ ಬಿ, ಮುಂತಾದವರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

7 hours ago