ಬಿಐಟಿ ಮತ್ತು ಬೀಡ್ಸ್ ಎಂಜಿನಿಯರಿಂಗ್ ಕಾಲೇಜು ವತಿಯಿಂದ ಸಿಇಟಿ ಪೂರಕ ಪರೀಕ್ಷೆ ಹಾಗೂ ವೃತ್ತಿಪರ ಕೋರ್ಸುಗಳ ಮಾರ್ಗದರ್ಶನ ಕಾರ್ಯಾಗಾರ ಕೊಳ್ನಾಡು ಗ್ರಾಮದ ನಾರ್ಶ ಮೈದಾನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತಿಚೆಗೆ ನಡೆಯಿತು.
ಸಿಇಟಿ ಪೂರಕ ಪರೀಕ್ಷೆಯನ್ನು ಬಿಐಟಿ ಕಾಲೇಜಿನ ಅಧ್ಯಾಪಕ ಇಮ್ರಾನ್ ಯು. ಎ, ನಿತಿನ್, ಸುಶಾಂತ್ ಹಾಗೂ ಮುಸ್ತಫಾ ಖಲೀಲ್ ವಿಟ್ಲ ನಡೆಸಿಕೊಟ್ಟರು.
ವಿಜೇತ ವಿದ್ಯಾರ್ಥಿಗಳಾದ ಮಿಸರಿಯ, ಮಾರಿಯಮ್ಮ ಹಾಗೂ ಅರ್ಶಿದ ಬಾನು ಅವರಿಗೆ ಪ್ರಮಾಣ ಪತ್ರ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಸರಕಾರಿ ಕಾಲೇಜಿನ ಪ್ರಾಂಶುಪಾಲೆ ಸಿಂತಿಯ ಡಿಸೋಜಾ, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಜಾಹೀರಾತು
ಸಿಇಟಿ ಪೂರಕ ಪರೀಕ್ಷೆ ಹಾಗೂ ವೃತ್ತಿಪರ ಕೋರ್ಸುಗಳ ಬಗ್ಗೆ ಮಾರ್ಗದರ್ಶನ ನೀಡಲಾಯಿತು. ಈ ಕಾರ್ಯಕ್ರಮವು ಬಿಐಟಿ ಪ್ರಾಂಶುಪಾಲ ಡಾ. ಆಂಥೋನಿ ಯವರ ಮಾರ್ಗದರ್ಶನದಲ್ಲಿ ನಡೆಯಿತು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವೃತ್ತಿಪರ ಕೋರ್ಸುಗಳ ಮಾರ್ಗದರ್ಶನ ಕಾರ್ಯಾಗಾರ"