ಬಂಟ್ವಾಳ

ಶೋಷಣೆಮುಕ್ತ ಸಮಾಜಕ್ಕೆ ವಿಶ್ವನಾಥ ನಾಯಕ್, ಪಿ.ಸಂಜೀವ ಶ್ರಮ: ರಮಾನಾಥ ರೈ

www.bantwalnews.com

ಜಾಹೀರಾತು

ದೀನದಲಿತರ, ಬಡವರ್ಗಗಳ, ಅಭ್ಯುದಯಕ್ಕಾಗಿ ,ಶೋಷಣೆ ಮುಕ್ತ ಸಮಾಜಕ್ಕಾಗಿ ಶ್ರಮಿಸಿರುವ   ಕಮ್ಯುನಿಸ್ಟ್ ನೇತರರಾದ ಬಿ. ವಿಶ್ವನಾಥ್ ನಾಯಕ್ ಹಾಗೂ ಪಿ. ಸಂಜೀವ ಇವರುಗಳ ಆದರ್ಶ, ಆಲೋಚನೆಗಳು ಸದಾ ಕಾಲ ಜೀವಂತವಾಗಿರಬೇಕು‌ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಹೇಳಿದರು.

ಕಮ್ಯೂನಿಸ್ಟ್ ಪಕ್ಷದ ಹಿರಿಯ ನಾಯಕರುಗಳಾದ ಬಿ.ವಿಶ್ವನಾಥ ನಾಯಕ್ ಮತ್ತು ಪಿ.ಸಂಜೀವ ರವರುಗಳ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಭಾನುವಾರ ಬಿ.ಸಿ.ರೋಡ್ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ  ನಡೆದ ಭಾರತ ಕಮ್ಯೂನಿಸ್ಟ್ ಪಕ್ಷ(ಸಿಪಿಐ)ದ ದ.ಕ ಮತ್ತು ಉಡುಪಿ ಜಿಲ್ಲಾ ಸಮಿತಿ ಹಾಗೂ ಸಾರ್ವಜನಿಕ  ಶ್ರದ್ಧಾಂಜಲಿ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಭೂ ಮಸೂದೆ ಕಾನೂನು ಜಾರಿಯಾದಾಗ ಈ ನಾಯಕರು ಗೇಣಿದಾರರ ಪರವಾಗಿದ್ದರು. ನಾನು ಮತ್ತು ಬಿ.ವಿಶ್ವನಾಥ ನಾಯಕ್ ಭೂಅಭಿವೃದ್ದಿ ಬ್ಯಾಂಕಿನ ನಿರ್ದೇಶಕರಾಗಿದ್ದಾಗ ಮತ್ತು ವಿಧಾನ ಸಭಾ ಚುನಾವಣೆಯಲ್ಲಿ ನಾವಿಬ್ಬರು ಸ್ಪರ್ಧಿಸಿದಾಗ ನಮ್ಮ ಸಂಬಂಧ, ಪ್ರೀತಿ ಗಟ್ಟಿಯಾಯಿತು. ಇವರು ಅಭಿಮಾನ ಮತ್ತು ಪ್ರೀತಿಯ ಸಂಕೇತವಾಗಿದ್ದರು. ಸರಳ, ಸಜ್ಜನಿಕೆಯ ವ್ಯಕ್ತಿಗಳಾಗಿದ್ದ ಇವರ ಆದರ್ಶ, ಆಲೋಚನೆ , ಯೋಜನೆ ಜೀವಂತವಾಗಿರಲಿ ಎಂದು ಅವರು ಹೇಳಿದರು.

ಎಐಟಿಯುಸಿ ರಾಜ್ಯಾಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಮಾತನಾಡಿ ದ.ಕ ಜಿಲ್ಲೆಯ ರೈತ ಕಾರ್ಮಿಕ ಚಳುವಳಿಗಳ ರೂವಾರಿಗಳಾದ ಇವರೀರ್ವರು ತನ್ನ ವೈಯಕ್ತಿಕ ಬದುಕಿಗಿಂತ ಸಾರ್ವಜನಿಕರ ಬದುಕಿಗೆ ಪ್ರಾಮುಖ್ಯತೆ ಕೊಟ್ಟವರು. ಭೂಸುಧಾರಣಾ ಚಳುವಳಿಯಲ್ಲಿ ಉಳುವವನೇ ಹೊಲದೊಡೆಯ ಕಾನೂನು ಜಾರಿಗಾಗಿ  ನ್ಯಾಯಕ್ಕನುಗುಣವಾಗಿ ಹೋರಾಡಿ ಗೇಣಿದಾರರಿಗೆ ಭೂಮಿ ತೆಗೆಸಿಕೊಟ್ಟವರು. ರೈತಾಪಿ ಕೃಷಿಕೂಲಿ, ಬೀಡಿ ಕಾರ್ಮಿಕರ ಬದುಕನ್ನು ಹಸನಾಗಿಸಲು ಇವರೀರ್ವರ ಹೋರಾಟ ಅವಿಸ್ಮರಣೀಯ. ಇವರ ಆದರ್ಶಗಳನ್ನು ಪಾಲಿಸುವುದೇ ಇವರಿಗೆ ನೀಡುವ ನಿಜವಾದ ನುಡಿನಮನ ಎಂದರು.

ಸಭೆಯಲ್ಲಿ ಸಿಪಿಎಂ ಮುಂದಾಳು ಯಾದವ ಶೆಟ್ಟಿ, ವಾಸು ಗಟ್ಟಿ, ಸಿಪಿಐ ಕಾಸರಗೋಡು ಜಿಲ್ಲಾ ಸಹಕಾರ್ಯದರ್ಶಿ ಬಿ.ವಿ.ರಾಜನ್, ಬೂಡಾ ಅಧ್ಯಕ್ಷ ಸದಾಶಿವ ಬಂಗೇರ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ವಕೀಲ ಅಶ್ವನಿಕುಮಾರ್ ರೈ,  ಮಂಗಳೂರು   ಗಾಳದ ಕೊಂಕಣಿ   ಅಭ್ಯುದಯ ಸಂಘದ ಪ್ರ.ಕಾರ್ಯದರ್ಶಿ ಕೋಡಿ ಜಯ ನಾಯಕ್, ಪಿ.ಸಂಜೀವರ ಪುತ್ರ ಯೋಗೀಶ್ ಕುಮಾರ್ ಮುಂತಾದವರು ನುಡಿ-ನಮನ ಸಲ್ಲಿಸಿದರು.

ವೇದಿಕೆಯಲ್ಲಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ಉಪಸ್ಥಿತರಿದ್ದರು. ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಬಿ.ಶೇಖರ್ ಅಧ್ಯಕ್ಷತೆ ವಹಿಸಿದ್ದರು.

ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ವಿ.ಎಸ್.ಬೇರಿಂಜ ಪ್ರಸ್ತಾವನೆಯೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಪಕ್ಷದ ಜಿಲ್ಲಾ ಮುಖಂಡರಾದ ಸುರೇಶ್ ಕುಮಾರ್ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago