ವಿಟ್ಲ

ಹಿರಿಯ ವಿದ್ವಾಂಸ ಪಾದೆಕಲ್ಲು ನರಸಿಂಹ ಭಟ್ ಇನ್ನಿಲ್ಲ

www.bantwalnews.com

ಜಾಹೀರಾತು

 

ತ್ರಿಭಾಷಾ ವಿದ್ವಾಂಸ, ತೌಲನಿಕ ಕಾವ್ಯಮೀಮಾಂಸೆಯ ಸಂಶೋಧಕ, ಕೃಷಿಕ, ಕರೋಪಾಡಿ ಗ್ರಾಮದ ಪಾದೆಕಲ್ಲು ನಿವಾಸಿ ಪಾದೆಕಲ್ಲು ನರಸಿಂಹ ಭಟ್ (83) .22ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಕನ್ನಡ, ಸಂಸ್ಕೃತ, ಆಂಗ್ಲಭಾಷಾ ವಿದ್ವಾಂಸರಾದ ಅವರು ಕಮ್ಮಜೆ ಸಂಸ್ಕೃತ ಪಾಠಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಪಡೆದು ಮದರಾಸು ಸರಕಾರದ ಸಂಸ್ಕೃತ ಎಂಟ್ರೆನ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಇತಿಹಾಸ ವಿಷಯಗಳಲ್ಲಿ ಪದವೀಧರರಾದ ಅವರು ಮದರಾಸು ವಿವೇಕಾನಂದ ಕಾಲೇಜಿನಲ್ಲಿ ಸಂಸ್ಕೃತ ಎಂ..ಪೂರೈಸಿದ್ದು, ಆಗ ವಿಶ್ವವಿದ್ಯಾನಿಲಯದಲ್ಲೇ ಪ್ರಥಮ ಸ್ಥಾನ ಗಳಿಸಿದ್ದರು. ಮದರಾಸು, ಸಾಗರದಲ್ಲಿ ಉದ್ಯೋಗಿಯಾಗಿದ್ದ ಅವರು ಮೈಸೂರಿನ ಮಾನಸಗಂಗೋತ್ರಿಯ ಆಂಗ್ಲ ವಿಭಾಗದಲ್ಲಿ ತೌಲನಿಕ ಕಾವ್ಯಮೀಮಾಂಸೆಯ ಬಗೆಗೆ ಮೂರು ವರ್ಷ ಸಂಶೋಧನೆ ನಡೆಸಿದ್ದರು. ಸಾಹಿತ್ಯ, ದರ್ಶನ, ಸಾಮಾಜಿಕ, ಶೈಕ್ಷಣಿಕ ವಿಷಯಗಳ ಕುರಿತಾಗಿ ೪೦ಕ್ಕೂ ಅಽಕ ಲೇಖನಗಳು ವಿವಿಧ ಸಂಕಲನಗಳಲ್ಲಿ ಪ್ರಕಟವಾಗಿದ್ದವು. ಅವರು ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಸ್ವೀಡನ್‌ನ ಕೆಮಿರಾ ಫ್ರೆಡ್‌ಮನ್ ಎಂಬ ಮಹಿಳೆಗೆ ಭಾರತೀಯ ಸೌಂದರ್ಯ ಮೀಮಾಂಸೆಯ ಕುರಿತು ಮಾರ್ಗದರ್ಶನ ನೀಡಿದ್ದರು. ಕೃಷಿಕರಾಗಿದ್ದ ಅವರ ಅನೇಕ ಕೃತಿಗಳು ಪ್ರಕಟಗೊಂಡಿವೆ. ಸಂಶೋಧನಾತ್ಮಕ ಕೃತಿ ಅಭಿನವಗುಪ್ತ, ದಿ| ಸೇಡಿಯಾಪು ಕೃಷ್ಣ ಭಟ್ ಅವರ ತಥ್ಯದರ್ಶನದ ಆಂಗ್ಲಾನುವಾದ ದಿ ಡಿಸ್ಕವರಿ ಆಫ್ ಫೇಕ್ಟ್, ಭಾರತೀಯ ಋಷಿ ಪರಂಪರೆ ಮತ್ತು ಸಂಸ್ಕೃತ ಸಾಹಿತ್ಯ, ಶಿಕ್ಷಣ ಶೋಧನ, ಭಾರತೀಯ ಕಾವ್ಯಮೀಮಾಂಸೆಯ ಹೊಸ ಹೊಳಹುಗಳು ಮೊದಲಾದ ಕೃತಿಗಳು ಪ್ರಕಟಗೊಂಡಿವೆ. ಅಲ್ಲದೇ ಹಲವಾರು ಕೃತಿಗಳ ಸಂಪಾದಕರಾಗಿದ್ದರು.

ಅವರು ಬಂಟ್ವಾಳ ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಮತ್ತು ಮಂಗಳೂರಿನ ಪುರಭವನದಲ್ಲಿ ..ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದರು. ದೇರಾಜೆ ಸ್ಮೃತಿ ಗೌರವ, ಸಿದ್ಧಮೂಲೆ ಶಂಕರನಾರಾಯಣ ಭಟ್ ಅವರ ಸಂಸ್ಥೆಯ ಶಂಕರ ಪ್ರಶಸ್ತಿ, ಉಂಡೆಮನೆ ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಗಿದೆ.

ಸಂತಾಪ : ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ..ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ನರಸಿಂಹ ಭಟ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.