ವಿಟ್ಲ

ವಿಟ್ಲದಲ್ಲಿ ಮತ್ತೆ ಕಳ್ಳರ ಕಾಟ

ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವದ ದಿನ ವಿಟ್ಲದ ಕಚೇರಿ, ಅಂಗಡಿ ಹಾಗೂ ಕೋಣೆಗಳಿಗೆ ನುಗ್ಗಿದ ಕಳ್ಳರು ಸರಣಿ ಕಳ್ಳತನ ಮಾಡಿದ್ದಾರೆ.  ಮಹಿಳೆಯೊಬ್ಬರ ಕುತ್ತಿಗೆಯಿಂದ ಸರ ಎಗರಿಸಿದ ಪ್ರಕರಣವೂ ಭಾನುವಾರ ರಾತ್ರಿ ನಡೆದಿದೆ.

ಜಾಹೀರಾತು

ಏನೆಲ್ಲ ನಡೆದಿದೆ?

ಜಾತ್ರೋತ್ಸವಕ್ಕೆ ಆಗಮಿಸಿದ್ದ ಕೇಪು ಗ್ರಾಮದ ಮಹಿಳೆಯೊಬ್ಬರ ಕುತ್ತಿಗೆಯಿಂದ ಮೂರುವರೆ ಪವನ್ ತೂಕದ ಚಿನ್ನದ ಸರ ಎಗರಿಸಿದ್ದಾರೆ.

ವಿಟ್ಲದ ವಿ.ಎಚ್ ಕಾಂಪ್ಲೆಕ್ಸ್‌ನಲ್ಲಿರುವ ವಕೀಲ ಉಮ್ಮರ್ ಅವರ ಕಚೇರಿಯ ಶಟರ್ ಮುರಿದು ಒಳನುಗ್ಗಿದ ಕಳ್ಳರು ಸ್ವತ್ತುಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಕೈಗೆ ಏನೂ ಸಿಗದಿದ್ದಾಗ ಬರಿಗೈಯಲ್ಲಿ ಹಿಂತಿರುಗಿ ಅದರ ಪಕ್ಕದಲ್ಲಿರುವ ಪ್ಯಾರಡೈಸ್ ಹೋಟೆಲ್‌ಗೆ ನುಗ್ಗಿದ ಕಳ್ಳರು ಅಲ್ಲಿಂದ ನಗದು ದೋಚಿದ್ದಾರೆ.

ಬಳಿಕ ವಿಟ್ಲದ ಸ್ಪೈಸಿ ಹೋಟೆಲ್‌ನ ಸಿಬ್ಬಂದಿಗಳ ಕೋಣೆಗೆ ನುಗ್ಗಿದ ಕಳ್ಳರು ಅಲ್ಲಿಂದ ನಾಲ್ಕು ಮೊಬೈಲ್ ಕದ್ದೊಯ್ದಿದ್ದಾರೆ. ಸ್ಥಳದಲ್ಲಿ ಕಳ್ಳತನಕ್ಕೆ ಬಳಸಿದ ಮಾರಕಾಯುಧಗಳು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.