ವಿಟ್ಲ

ವಿಟ್ಲದಲ್ಲಿ ಮತ್ತೆ ಕಳ್ಳರ ಕಾಟ

ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವದ ದಿನ ವಿಟ್ಲದ ಕಚೇರಿ, ಅಂಗಡಿ ಹಾಗೂ ಕೋಣೆಗಳಿಗೆ ನುಗ್ಗಿದ ಕಳ್ಳರು ಸರಣಿ ಕಳ್ಳತನ ಮಾಡಿದ್ದಾರೆ.  ಮಹಿಳೆಯೊಬ್ಬರ ಕುತ್ತಿಗೆಯಿಂದ ಸರ ಎಗರಿಸಿದ ಪ್ರಕರಣವೂ ಭಾನುವಾರ ರಾತ್ರಿ ನಡೆದಿದೆ.

ಜಾಹೀರಾತು

ಏನೆಲ್ಲ ನಡೆದಿದೆ?

ಜಾತ್ರೋತ್ಸವಕ್ಕೆ ಆಗಮಿಸಿದ್ದ ಕೇಪು ಗ್ರಾಮದ ಮಹಿಳೆಯೊಬ್ಬರ ಕುತ್ತಿಗೆಯಿಂದ ಮೂರುವರೆ ಪವನ್ ತೂಕದ ಚಿನ್ನದ ಸರ ಎಗರಿಸಿದ್ದಾರೆ.

ಜಾಹೀರಾತು

ವಿಟ್ಲದ ವಿ.ಎಚ್ ಕಾಂಪ್ಲೆಕ್ಸ್‌ನಲ್ಲಿರುವ ವಕೀಲ ಉಮ್ಮರ್ ಅವರ ಕಚೇರಿಯ ಶಟರ್ ಮುರಿದು ಒಳನುಗ್ಗಿದ ಕಳ್ಳರು ಸ್ವತ್ತುಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಕೈಗೆ ಏನೂ ಸಿಗದಿದ್ದಾಗ ಬರಿಗೈಯಲ್ಲಿ ಹಿಂತಿರುಗಿ ಅದರ ಪಕ್ಕದಲ್ಲಿರುವ ಪ್ಯಾರಡೈಸ್ ಹೋಟೆಲ್‌ಗೆ ನುಗ್ಗಿದ ಕಳ್ಳರು ಅಲ್ಲಿಂದ ನಗದು ದೋಚಿದ್ದಾರೆ.

ಬಳಿಕ ವಿಟ್ಲದ ಸ್ಪೈಸಿ ಹೋಟೆಲ್‌ನ ಸಿಬ್ಬಂದಿಗಳ ಕೋಣೆಗೆ ನುಗ್ಗಿದ ಕಳ್ಳರು ಅಲ್ಲಿಂದ ನಾಲ್ಕು ಮೊಬೈಲ್ ಕದ್ದೊಯ್ದಿದ್ದಾರೆ. ಸ್ಥಳದಲ್ಲಿ ಕಳ್ಳತನಕ್ಕೆ ಬಳಸಿದ ಮಾರಕಾಯುಧಗಳು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ