ಸರ್ಕಾರದ ಯಾವ ಯೋಜನೆಗಳಲ್ಲೂ ಸ್ಪಷ್ಟತೆ ಇಲ್ಲ: ಸುನೀಲ್ ಕುಮಾರ್

ಬಿಜೆಪಿ ಸರ್ಕಾರ ಇದ್ದಾಗ ರೂಪಿಸಿದ ಯೋಜನೆಗಳನ್ನು ಬದಲಾಯಿಸಿ ಈಗಿನ ಕಾಂಗ್ರೆಸ್ ಸರ್ಕಾರ ಅದನ್ನು ಮತ್ತಷ್ಟು ಸಂಕುಚಿತಗೊಳಿಸಿತೇ ವಿನ: ಯಾವುದೇ ಸ್ಪಷ್ಟತೆಯನ್ನು ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಿಲ್ಲ. 2,80,000 ಕೋಟಿ ರೂಪಾಯಿ ಸಾಲವನ್ನಷ್ಟೇ ಸಿದ್ಧರಾಮಯ್ಯ ಎಲ್ಲರ ಮೇಲೆ ಹೊರಿಸಿದ್ದಾರೆ ಎಂದು ಕಾರ್ಕಳ ಶಾಸಕ, ಬಿಜೆಪಿ ಮುಖಂಡ ವಿ.ಸುನಿಲ್ ಕುಮಾರ್ ಹೇಳಿದರು.

ಜಾಹೀರಾತು

ಕಲ್ಲಡ್ಕದಲ್ಲಿ ಸೋಮವಾರ ರಾತ್ರಿ ನಡೆದ ಬಿಜೆಪಿ ಬಂಟ್ವಾಳ ವತಿಯಿಂದ ನಡೆಯುತ್ತಿರುವ ಪರಿವರ್ತನೆಗೆ ನಮ್ಮ ನಡಿಗೆಯ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ವರ್ಷಕ್ಕೆ 30 ಕಿ.ಮೀ. ಅಭಿವೃದ್ಧಿಯನ್ನು ಬಿಜೆಪಿ ನೇತೃತ್ವದ ಸರಕಾರ ಇದ್ದಾಗ ಮಾಡಿದ್ದರೆ,  ಈ ಸರಕಾರ 20 ಕಿ.ಮೀಯನ್ನಷ್ಟೇ ಮಾಡುತ್ತಿದೆ. ರೇಷನ್ ಕಾರ್ಡ್ ಸಮಸ್ಯೆ ಇವತ್ತಿನವರೆಗೂ ಬಗೆಹರೀಲಿಲ್ಲ. ಸ್ಪಷ್ಟವಾದ ಮರಳು ನೀತಿ ಜಾರಿಯಾಗಿಲ್ಲ. ಲೋಕಾಯುಕ್ತ ದುರ್ಬಲಗೊಂಡಿದೆ. ಭ್ರಷ್ಟಾಚಾರ ಇಲಾಖೆ, ಇಲಾಖೆಯಲ್ಲಿವೆ, ಈ ಸರಕಾರದಲ್ಲಿ ನೀತಿ ಇಲ್ಲ, ಸ್ಪಷ್ಟತೆ ಇಲ್ಲ, ಯಾವ ಯೋಜನೆಗಳನ್ನು ಜಾರಿಗೆ ಕೊಡಬೇಕು ಎಂಬ ಆಲೋಚನೆ ಮಾಡಿಲ್ಲ, ಕಾನೂನು ಸುವ್ಯವಸ್ಥೆ ಚೆನ್ನಾಗಿಲ್ಲ, ಸರ್ಕಾರಿ ನೌಕರರೇ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲೂ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸುನೀಲ್ ಕುಮಾರ್ ಹೇಳಿದರು.

2014ರಲ್ಲಿ ಅಧಿವೇಶನದಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಯೆ ಯಾವತ್ತು ಬಗೆಹರಿಸ್ತೀರಿ ಎಂದು ಕೇಳಿದಾಗ ಅರಣ್ಯ ಸಚಿವ ರೈ ಒಂದು ವರ್ಷದಲ್ಲಿ ಬಗೆಹರಿಸುವ ಮಾತನಾಡಿದ್ದರು. ನಾಲ್ಕು ವರ್ಷವಾದರೂ ಸಮಸ್ಯೆ ಹಾಗೇ ಇದೆ. ಅದರ ಪರಿಣಾಮ ಬಡಜನರಿಗೆ ಹಕ್ಕುಪತ್ರ ಕೊಡಲಾಗಲಿಲ್ಲ. ನಾಲ್ಕು ವರ್ಷಗಳಿಂದ ಅರಣ್ಯ ಸಚಿವರು ಏನು ಮಾಡುತ್ತಿದ್ದಾರೆ ಎಂದು ಸುನೀಲ್ ಕುಮಾರ್ ಪ್ರಶ್ನಿಸಿದರು.

ಈ ಸಂದರ್ಭ ಮಾತನಾಡಿದ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಆರು ತಿಂಗಳಲ್ಲಿ ಮೂರು ಎಸ್ಪಿ ಬಂದರು. ಯಾವತ್ತೂ ಇಂಥ ಪರಿಸ್ಥಿತಿ ನಿರ್ಮಾಣ ಆಗಿಲ್ಲ. ಕಲ್ಲಡ್ಕ , ಪುಣಚಕ್ಕೆ ಹಣಕಾಸು ನೆರವು ರದ್ದುಗೊಳಿಸುವಂತೆ ಸಚಿವ ರೈ ಅವರೇ ಪತ್ರ ಬರೆದಿದ್ದಾರೆ ಎಂದರು.

ಜಾಹೀರಾತು

ಡಾ. ಪ್ರಸಾದ್ ಭಂಡಾರಿ, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿದರು. ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪಕ್ಷ ಪ್ರಮುಖರಾದ ಜಿ.ಆನಂದ, ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ದಿನೇಶ್ ಅಮ್ಟೂರು, ಜಯಲಕ್ಷ್ಮೀ ಭಟ್, ರಾಜೇಶ್ ಕೊಟ್ಟಾರಿ, ವಿದ್ಯಾಧರ ರೈ, ಲೋಕಾನಂದ ಏಳ್ತಿಮಾರ್, ಜಯರಾಮ ರೈ, ತನಿಯಪ್ಪ ಗೌಡ, ದಿನೇಶ ಭಂಡಾರಿ, ಆನಂದ ಶಂಭೂರು, ವಿಠಲ ನಾಯ್ಕ, ಧೀರಜ್ ಬಲ್ಲೆಕೋಡಿ, ಜಗನ್ನಾಥ ಕುಲಾಲ್, ರಮೇಶ್ ಕುದ್ರೆಬೆಟ್ಟು, ಸೀಮಾ ಮಾಧವ, ವಜ್ರನಾಥ ಕಲ್ಲಡ್ಕ, ಮಹಾಬಲ ಆಳ್ವ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸರ್ಕಾರದ ಯಾವ ಯೋಜನೆಗಳಲ್ಲೂ ಸ್ಪಷ್ಟತೆ ಇಲ್ಲ: ಸುನೀಲ್ ಕುಮಾರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*