ಬಂಟ್ವಾಳ ಪುರಸಭಾ ವ್ಯಾಪ್ತಿಯ ವಾರ್ಡ್ ನಂ.16ರ ಶಾಂತಿ ಅಂಗಡಿ ಎಲ್ಐಸಿ ಬಳಿಯ ಕಾಂಕ್ರೀಟ್ ರಸ್ತೆ , ಅದ್ದೇಡಿ 2ನೇ ಅಡ್ಡ ರಸ್ತೆ ಹಾಗೂ ತಾಳಿಪಡ್ಪು ಟಿಪ್ಪು ರಸ್ತೆ ತಡೆಗೋಡೆ ಕಾಂಕ್ರಿಟೀಕರಣ ರೂ.30ಲಕ್ಷ ವೆಚ್ಚದ ಕಾಮಗಾರಿಯ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.
ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಬೂಡಾ ಅಧ್ಯಕ್ಷ ಸದಾಶಿವ ಬಂಗೇರಾ, ಪುರಸಭಾ ಸದಸ್ಯ ಮಹಮ್ಮದ್ ಶರೀಫ್, ಪ್ರಮುಖರಾದ ಮಹಮ್ಮದ್ ನಂದಾವರ, ಹಸೈನಾರ್, ಮಹಮ್ಮದ್ ಆಲಿ ಮತ್ತಿತರರು ಉಪಸ್ಥಿತರಿದ್ದರು.