27ರಂದು ಬಿ.ಸಿ.ರೋಡಿನಲ್ಲಿ ವಿದ್ಯಾರತ್ನ ಕೆ.ರಮೇಶ ನಾಯಕ್ ರಾಯಿ ಸಾಧನಾ ಸಂಭ್ರಮ

ಉತ್ತಮ ಶಿಕ್ಷಕ ರಾಷ್ಟ್ರಪ್ರಶಸ್ತಿ ಪುರಸ್ಕೃತ, ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕೆದ್ದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಕೆ.ರಮೇಶ ನಾಯಕ್ ರಾಯಿ ಅವರು ಇತ್ತೀಚೆಗೆ ಸೇವೆಯಿಂದ ನಿವೃತ್ತಿಗೊಂಡಿದ್ದು, ಅವರ ಬಹುಮುಖಿ ಸಾಧನೆಯನ್ನು ಗುರುತಿಸಿ ಗೌರವಿಸುವ ಉದ್ಧೇಶದಿಂದ ಜ. 27ರಂದು ಮಧ್ಯಾಹ್ನ 2ಗಂಟೆಗೆ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ “ವಿದ್ಯಾರತ್ನ ಕೆ.ರಮೇಶ ನಾಯಕ್ ರಾಯಿ ಸಾಧನಾ ಸಂಭ್ರಮ” ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಬಂಟ್ವಾಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

ಜಾಹೀರಾತು

ಮಂಗಳವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಟ್ವಾಳ ತಾಲೂಕು ಸರಕಾರಿ ನೌಕರರ ಸಂಘ, ಬಂಟ್ವಾಳ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ವಿಟ್ಲ ಅಧ್ಯಾಪಕರ ಸಹಕಾರಿ ಸಂಘ ಹಾಗೂ “ರಮೇಶ ನಾಯಕ್ ಸಾಧನಾ ಸಂಭ್ರಮ ಸಮಿತಿ” ಸಹಭಾಗಿತ್ವದಲ್ಲಿ “ಸಾಧನಾ ಸಂಭ್ರಮ” ಸಮಾರಂಭವನ್ನು ಆಯೋಜಿಸಲಾಗಿದ್ದು ಈ ಮೂಲಕ ನಾಯಕರ ಶೈಕ್ಷಣಿಕ, ಸಹಕಾರಿ ಮತ್ತು ಸಾಮಾಜಿಕ ಬದುಕಿನ ಸಾಧನೆಯನ್ನು ತೆರೆದಿಡಲು ಪ್ರಯತ್ನಿಸಲಾಗುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ರಾವ್ ಕುಕ್ಕಾಜೆ ಅಧ್ಯಕ್ಷತೆ ವಹಿಸಲಿದ್ದು, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೆರಾ, ಬಂಟ್ವಾಳ ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಕೆದ್ದಳಿಕೆ ಶಾಲಾ ಗೌರವಾಧ್ಯಕ್ಷ ಬಿ.ಪದ್ಮಶೇಖರ ಜೈನ್, ತಹಶೀಲ್ದಾರ್ ಪುರಂದರ ಹೆಗ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಅತಿಥಿಗಳಾಗಿ ಭಾಗವಹಿಸುವರು ಎಂದರು.
“ರಮೇಶ ನಾಯಕ್ ಮತ್ತು ಶಿಕ್ಷಣ” ವಿಷಯದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಶಂಕರ ಭಟ್, “ರಮೇಶ ನಾಯಕ್ ಮತ್ತು ಸಾಮಾಜಿಕ ಜೀವನ” ವಿಷಯದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಎ.ಗೋಪಾಲ ಅಂಚನ್ ವಿಷಯ ಮಂಡಿಸುವರು. ಸಮಾರಂಭದಲ್ಲಿ ರಮೇಶ ನಾಯಕ್ ಅವರಿಗೆ ಸಾರ್ವಜನಿಕ ಸನ್ಮಾನ, ಸಾಕ್ಷ್ಯ ಚಿತ್ರ ಪ್ರದರ್ಶನದ ಮೂಲಕ ಸಾಧನೆಯ ಅವಲೋಕನ ಹಾಗೂ ರಮೇಶ ನಾಯಕ್ ಅವರ ಗುರು ಚಂದ್ರಶೇಖರ ರಾವ್ ಕುಕ್ಕಾಜೆ ಅವರಿಗೆ ಗುರುವಂದನೆ ನಡೆಯಲಿದೆ ಎಂದು ಹೇಳಿದರು.

ಜಾಹೀರಾತು

ಪ್ರಶಸ್ತಿಗಳು: 2001-02 ರಲ್ಲಿ ಜನಮೆಚ್ಚಿದ ಶಿಕ್ಷಕ ಪ್ರಶಸ್ತಿ, 2002-03ರಲ್ಲಿ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, 2004-05 ರಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, 2011-12ರಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, 2013-14 ರಲ್ಲಿ ರಾಷ್ಟ್ರೀಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ,2015 ರಲ್ಲಿ ವಿದ್ಯಾರತ್ನ ಪ್ರಶಸ್ತಿ, ಅಕ್ಷರ ಗೌರವ ಪುರಸ್ಕಾರ, ವಜ್ರಾಕ್ಷ ಮಲ್ಲಿ ಸ್ಕೃತಿ ಗೌರವ ಪುರಸ್ಕೃತರಾದ ರಮೇಶ ನಾಯಕ್ ಅವರು ರಾಜ್ಯ, ಜಿಲ್ಲಾ ಮಟ್ಟದ ಹಲವಾರು ಸಂಘಟನೆಗಳಿಂದ ಪ್ರಶಸ್ತಿ, ಪುರಸ್ಕಾರ, ಸನ್ಮಾನಗಳಿಗೆ ಪಾತ್ರರಾಗಿರುವುದು ಅವರ ಸಾಧನಾಶೀಲತೆಯ ದ್ಯೋತಕವಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು, ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ಉಪಾಧ್ಯಕ್ಷ ಕೆ.ಮೋನಪ್ಪ, ಸಾಧನ ಸಂಭ್ರಮದ ಸಮಿತಿ ಅಧ್ಯಕ್ಷ ಟಿ.ಶೇಷಪ್ಪ ಮೂಲ್ಯ, ಪದಾಧಿಕಾರಿಗಳಾದ ಎಚ್ಕೆ.ನಯನಾಡು, ನವೀನ್ ಪಿ.ಎಸ್, ಜನಾರ್ಧನ್ ಜೆ, ಕೃಷ್ಣ ಪ್ರಕಾಶ್, ದಿವಾಕರ ದಾಸ್ ಕಾವಳಕಟ್ಟೆ, ನಾರಾಯಣ ಸಿ.ಪೆರ್ನೆ, ಚಂದ್ರಶೇಖರ ಪ್ರಭು, ಗಣೇಶ ನಾಯಕ್ ವಾಮದಪದವು ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "27ರಂದು ಬಿ.ಸಿ.ರೋಡಿನಲ್ಲಿ ವಿದ್ಯಾರತ್ನ ಕೆ.ರಮೇಶ ನಾಯಕ್ ರಾಯಿ ಸಾಧನಾ ಸಂಭ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*