ಫೆ.18ರಂದು ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಬಳಿಯ ಮೈದಾನದ ಆತ್ಮಾನಂದ ಸರಸ್ವತಿ ವೇದಿಕೆಯಲ್ಲಿ ನಡೆಯುವ ಸೀತಾರಾಮ ಕಲ್ಯಾಣೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಜ.28ರಂದು ಭಾನುವಾರ ಬಿರ್ವ ಸೆಂಟರ್ ನಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಈ ಸಭೆಯಲ್ಲಿ ತಾಲೂಕು ಸಮಿತಿ ಪದಾಧಿಕಾರಿಗಳು, ಪುರಸಭಾ ವ್ಯಾಪ್ತಿಯ ಪದಾಧಿಕಾರಿಗಳು, ಗ್ರಾಮ ಸಮಿತಿ ಅಧ್ಯಕ್ಷ, ಸಂಚಾಲಕರು, ಜಿಪಂ, ತಾಪಂ, ಗ್ರಾಪಂ ಸದಸ್ಯರು, ಮಹಿಳಾ ಘಟಕ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಲಹೆ ಸೂಚನೆ ನೀಡಬೇಕು ಎಂದು ಸಮಿತಿ ಅಧ್ಯಕ್ಷ, ಪದಾಧಿಕಾರಿಗಳು ವಿನಂತಿಸಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)