ಮತೀಯ ಸಾಮರಸ್ಯಕ್ಕೆ ಮಾನವ ಸರಪಳಿ ಅಗತ್ಯ: ರೈ


ಮತೀಯ ಸಾಮರಸ್ಯ ಸಾಧಿಸಲು ಮಾನವ ಸರಪಳಿಯಂಥ ಕಾರ್ಯಕ್ರಮ ಇಂದು ಅಗತ್ಯವಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಬಂಟ್ವಾಳದ ಬಿ.ಸಿ.ರೋಡಿನಲ್ಲಿ ಮಂಗಳವಾರ ಸಂಜೆ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸೌಹಾರ್ದತೆಗಾಗಿ ಕರ್ನಾಟಕ ಎಂಬ ಘೋಷವಾಕ್ಯದಡಿ ಕೋಮುದ್ವೇಷ ಸಹಿತ ನಾನಾ ಕಾರಣಗಳಿಂದ ಶಾಂತಿ ಕದಡುವ ಸನ್ನಿವೇಶವನ್ನು ತಿಳಿಗೊಳಿಸಿ, ಎಲ್ಲರೂ ಒಂದೇ ಎಂಬ ಭಾವನೆ ಮೂಡಿಸುವ ಸಲುವಾಗಿ ಜ.೩೦ರಂದು ಬಿ.ಸಿ.ರೋಡಿನ ಫ್ಲೈ ಓವರ್ ಅಡಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆ ಸಹಿತ ಸಮಾನ ಮನಸ್ಕ ಸಂಘಟನೆಗಳಡಿ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮತೀಯ ಸಾಮರಸ್ಯ ಕಾಪಾಡುವುದು ಇಂದಿನ ಅಗತ್ಯ ಎಂದ ಅವರು ಮನುಷ್ಯರನ್ನು ಮನುಷ್ಯರನ್ನಾಗಿ ನೋಡಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭ ಪ್ರಮುಖರಾದ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ನಾನಾ ಪಕ್ಷ, ಸಂಘಟನೆಗಳ ಮುಖಂಡರಾದ ಮಹಮ್ಮದ್ ಶಫಿ, ಬಿ.ಮೋಹನ್, ಹಾರೂನ್ ರಶೀದ್, ಪಿ.ಎ.ರಹೀಂ, ವಾಸು ಗಟ್ಟಿ, ಸಂಜೀವ ಬಂಗೇರ, ರಾಮಣ್ಣ ವಿಟ್ಲ, ಬಿ.ಶೇಖರ್, ಭಾನುಚಂದ್ರ ಕೃಷ್ಣಾಪುರ, ರಾಜ ಪಲ್ಲಮಜಲು, ಪ್ರಭಾಕರ ದೈವಗುಡ್ಡೆ ಸಹಿತ ಹಲವರು ಹಾಜರಿದ್ದರು. ಸುರೇಶ್ ಕುಮಾರ್ ಸ್ವಾಗತಿಸಿದರು. ಮಾನವ ಬಂಧುತ್ವ ವೇದಿಕೆಯ ತಾಲೂಕು ಸಂಚಾಲಕ ಎ.ಗೋಪಾಲ ಅಂಚನ್ ಪ್ರಾಸ್ತಾವಿಕ ಮಾತನಾಡಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮತೀಯ ಸಾಮರಸ್ಯಕ್ಕೆ ಮಾನವ ಸರಪಳಿ ಅಗತ್ಯ: ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*