ಜೇಸಿಐ ಬಂಟ್ವಾಳದ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ಪ್ರತಿಜ್ಞಾ ಸ್ವೀಕಾರ ಹಾಗೂ ಪರೀಕ್ಷಾ ಪೂರ್ವ ತರಬೇತಿ ಶಿಬಿರ ಶುಕ್ರವಾರ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ವಾಮದಪದವು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಬೆಳಿಗ್ಗೆ ಬಿ. ಮೂಡ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೇಸಿಐ ಬಂಟ್ವಾಳದ ಅಧ್ಯಕ್ಷ ದಯಾನಂದ ರೈ ರಾಷ್ಟ್ರೀಯ ಭಾವೈಕ್ಯತಾ ಪ್ರತಿಜ್ಞಾ ಸ್ವೀಕಾರದ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ಉಪಾಧ್ಯಕ್ಷ ಮಾಧವ ವಿ.ಎಸ್. ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯದರ್ಶಿ ಉಮೇಶ್ ಮೂಲ್ಯ, ಉಪಾಧ್ಯಕ್ಷ ಸದಾನಂದ ಬಂಗೇರಾ, ನಿಕಟ ಪೂವಾಧ್ಯಕ್ಷ ಡಾ. ಬಾಲಕೃಷ್ಣ, ಪೂವಾಧ್ಯಕ್ಷ ಸುರೇಶ್ ಕುಮಾರ್ ನಾವೂರು, ಕಾಲೇಜಿನ ಪ್ರಾಂಶುಪಾಲ ಯೂಸುಫ್, ಉಪನ್ಯಾಸಕಾರದ ದಾಮೋದರ್, ಅಬ್ದುಲ್ ರಝಾಕ್ ಅನಂತಾಡಿ, ಬಾಲಕೃಷ್ಣ ನಾಯ್ಕ್ ಹಾಜರಿದ್ದರು. ಮಧ್ಯಾಹ್ನದ ಬಳಿಕ ವಾಮದಪದವು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ದಯಾನಂದ ರೈ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು.
ಬಳಿಕ ವಲಯ ತರಬೇತುದಾರ ಯುವರಾಜ್ ಜೈನ್ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ ತರಬೇತಿ ಕಾರ್ಯಗಾರ ನಡೆಸಿಕೊಟ್ಟರು. ವೇದಿಕೆಯಲ್ಲಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಕಮಲ್ಶೆಟ್ಟಿ, ಕಾಲೇಜಿನ ಉಪಪ್ರಾಂಶುಪಾಲ ರಾಘವೇಂದ್ರ ಬಲ್ಲಾಳ, ಅಕ್ಷರ ಭಾರತಿ ವಿದ್ಯಾಲಯದ ಮುಖ್ಯ ಶಿಕ್ಷಕ ಮೋಹನ್ ಎಚ್, ಕಾರ್ಯಕ್ರಮ ಸಂಯೋಜಕ ಸಂತೋಷ್ ಜೈನ್, ಪೂರ್ವಾಧ್ಯಕ್ಷ ಸುರೇಶ್ ಕುಮಾರ್ ನಾವೂರು, ದಯಾ ಎಡ್ತೂರು, ಅಮೃತ್ ರೈ ಉಪಸ್ಥಿತರಿದ್ದರು. ಶಿಕ್ಷಕರಾದ ಮಮತಾ ಕೆ.ಸ್.ಸ್ವಾಗತಿಸಿ, ವಿನೋದಾ ವಂದಿಸಿದರು, ಜೇಸಿ ಪೂರ್ವಾಧ್ಯಕ್ಷ ಸಂದೀಪ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಭಾವೈಕ್ಯತಾ ಪ್ರತಿಜ್ಞಾ ಸ್ವೀಕಾರ"