ರೋಟರಿ ಕ್ಲಬ್ ಬಂಟ್ವಾಳ ಟೌನ್ ಹಾಗೂ ಜೇಸೀ ಐ ಜೋಡುಮಾರ್ಗ ನೇತ್ರಾವತಿ ಯ ಜಂಟಿ ಆಶ್ರಯದಲ್ಲಿ ತುಂಬೆ ಬಿ ಎ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ ಫೆಬ್ರವರಿ 2ರಂದು ಜರಗಿತು.
ತುಂಬೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಂಗಾಧರ ಆಳ್ವ ಇವರು ಮಕ್ಕಳಿಗೆ ಭಾವೈಕ್ಯತಾ ಪ್ರಮಾಣ ವಚನ ಭೋಧಿಸಿದರು
ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆಯ ಮಹತ್ವದ ಬಗ್ಗೆ ಜೇಸೀ ತರಬೇತುದಾರ ಉಮೇಶ್ ನಿರ್ಮಲ್ ಉಪನ್ಯಾಸ ನೀಡಿದರು.
ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಚಂದ್ರಹಾಸ ಶೆಟ್ಟಿ, ಜೇಸೀ ಐ ಜೋಡುಮಾರ್ಗ ನೇತ್ರಾವತಿ ಯ ಅಧ್ಯಕ್ಷರಾದ ಸವಿತಾ ನಿರ್ಮಲ್ ಹಾಗೂ ಆಶಾಪ್ರಸಾದ್ ರೈ ಯವರು ಶುಭ ಹಾರೈಸಿದರು.
ವೇದಿಕೆಯಲ್ಲಿ ಕಾಲೇಜಿನ ಇಂಟರಾಕ್ಟ್ ಕ್ಲಬ್ ನ ಸಂಯೋಜಕರಾದ ನವೀನ್ ರಾವ್, ಅಧ್ಯಾಪಕರು ಹಾಗೂ ಇಂಟರಾಕ್ಟ್ ಕ್ಲಬ್ ಪ್ರತಿ ನಿಧಿ ಗಳು , ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಸದಸ್ಯರಾದ ಜಯರಾಜ್ ಬಂಗೇರ, ಆದಂ ಸಲಾಮ್, ವಿಧ್ಯಾ ಚಂದ್ರಹಾಸ ಶೆಟ್ಟಿ ಉಪಸ್ತಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತುಂಬೆಯಲ್ಲಿ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ"