ಕಲ್ಲಡ್ಕ

ದೈವಾರಾಧನೆಯಲ್ಲಿ ತುಳು ಸಂಸ್ಕೃತಿ: ಒಡಿಯೂರು ಸ್ವಾಮೀಜಿ

  • ಸಾದಿಕುಕ್ಕು ಗುಡ್ಡೆಚಾಮುಂಡಿ-ಪಂಜುರ್ಲಿ-ಮಲೆಕೊರತಿ ದೈವಸ್ಥಾನ ಪ್ರತಿಷ್ಠಾಕಲಶಾಭಿಷೇಕ ಸಂದರ್ಭ ಧಾರ್ಮಿಕ ಸಭೆ

ಮನುಷ್ಯರಲ್ಲಿ ಸಾತ್ವಿಕ ಭಾವ ಹೆಚ್ಚಾಗಲು ದೇವರ ಕಾರ್ಯ ಮಾಡಬೇಕು. ದೈವಗಳ ಆರಾಧನೆಯಲ್ಲಿ ತುಳು ಸಂಸ್ಕೃತಿ ಅಡಗಿದೆ. ದೈವ ಮತ್ತು ಭೂಮಿಗೆ ಅನನ್ಯ ಸಂಬಂಧವಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಜಾಹೀರಾತು

ಅವರು ಭಾನುವಾರ ಪೆರಾಜೆ ಗ್ರಾಮದ ಸಾದಿಕುಕ್ಕು ಶ್ರೀ ಗುಡ್ಡೆಚಾಮುಂಡಿ-ಪಂಜುರ್ಲಿ-ಮಲೆಕೊರತಿ ದೈವಸ್ಥಾನದ ಪ್ರತಿಷ್ಠಾ ಕಲಶಾಭಿಷೇಕ ಮತ್ತು ಚಂಡಿಕಾ ಹೋಮ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ದೈವ ದೇವರ ಕಾರ್ಯ ಮಾಡಿದಲ್ಲಿ ಧರ್ಮ ಚಿಂತನೆಗೆ ದಾರಿಯಾಗುತ್ತದೆ. ನಾವು ಪ್ರಕೃತಿಯಲ್ಲಿ ದೇವರನ್ನು ಕಾಣಬಹುದು ಎಂದು ಹೇಳಿದ ಅವರು. ಸನಾತನ ಧರ್ಮವನ್ನು ಉಳಿಸುವ ಕಾರ್ಯ ಸಾದಿಕುಕ್ಕುವಿನಲ್ಲಿ ಆಗಿದೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಮಾತನಾಡಿ ಸನಾತನ ಹಿಂದೂ ಧರ್ಮ ವಿಶಾಲ ತಳಹದಿಯನ್ನು ಹೊಂದಿದೆ. ದೇವರ ಕೆಲಸ ಮಾಡುವವ ಎಂದೂ ಕೋಮುವಾದಿಯಲ್ಲ, ಇನ್ನೊಂದು ಧರ್ಮದವರನ್ನು ಧ್ವೇಷಿಸುವವನನ್ನು ಕೋಮುವಾದಿ ಎಂದು ಹೇಳಬಹುದು. ಮನಷ್ಯರಾಗಿ ಬದುಕಿ ಮನುಷ್ಯರನ್ನು ಪ್ರೀತಿಸಿದಾತ ದೇವರನ್ನು ಹತ್ತಿರವಾಗಿಸಲು ಸಾಧ್ಯ. ನಾವೆಲ್ಲರೂ ಶಾಂತಿ ಸಮಾದಾನದ ಸಮಾಜಕಟ್ಟುವ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಮಾಧವ ಮಾವೆ, ಪ್ರಕಾಶ್ ಶೆಟ್ಟಿ ತುಂಬೆ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ್ ಚೌಟ ಮಾಣಿ ಗುಡ್ಡೆ, ಕ್ಷೇತ್ರದ ಮಾರ್ಗದರ್ಶಕಿ ಪದ್ಮವತಿ ಆಳ್ವ, ಉಪಾಧ್ಯಕ್ಷರಾದ ಕುಶಲ ಎಂ ಪೆರಾಜೆ, ಶ್ರೀನಿವಾಸ್ ಪೆರಾಜೆ, ಕೋಶಾಧಿಕಾರಿ ಬಿ.ಟಿ ನಾರಾಯಣ ಭಟ್, ಗೌರವ ಸಲಹೆಗಾರ ಬಿ ಅಪ್ರಾಯ ಪೈ, ಶ್ರೀನಾಥ ಆಳ್ವ ಪೆರಾಜೆಗುತ್ತು ಉಪಸ್ಥಿತರಿದ್ದರು.

ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಚಂಡಿಕಾ ಹೋಮ, ಶ್ರೀ ದೈವಗಳ ಪ್ರತಿಷ್ಠಾ ಕಲಶಾಭಿಷೇಕ ನಡೆಯಿತು. ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಿಂದ ನೇರಳಕಟ್ಟೆ, ಮಾಣಿ, ಬುಡೋಳಿ ಮೂಲಕ ಹೊರೆಕಾಣಿಕೆ ಮೆರವಣಿಗೆ ಸಮರ್ಪಿಸಲಾಯಿತು.
ಬಾಲಕೃಷ್ಣ ಆಳ್ವ ಕೊಡಾಜೆ ನಿರೂಪಿಸಿದರು. ಅನುವಂಶೀಯ ಆಡಳಿತ ಮೊಕ್ತೇಸರರಾದ ಶ್ರೀಕಾಂತ ಆಳ್ವ ಪೆರಾಜೆಗುತ್ತು ಪ್ರಸ್ತಾವಣೆಗೈದರು. ಪ್ರಧಾನ ಕಾರ್ಯದರ್ಶಿ ಜನಾರ್ಧನ ಪೆರಾಜೆ ವಂದಿಸಿದರು. ಅಧ್ಯಕ್ಷ ಜಯರಾಮ ರೈ ಸ್ವಾಗತಿಸಿದರು. ದೀಪಾಲಿ, ಸ್ಮೀತಾ, ಸುಶ್ಮಿತಾ ಪ್ರಾರ್ಥಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

11 hours ago