ಬಂಟ್ವಾಳ

ಸ್ಮಶಾನದಲ್ಲೇ ನೇಣು ಬಿಗಿದು ಆತ್ಮಹತ್ಯೆ

pic: Internet

ವ್ಯಕ್ತಿಯೋರ್ವ ಅಂತ್ಯಕ್ರಿಯೆಗೆ ಬೇಕಾದ ಮಡಿಕೆ, ಬಿಳಿಬಟ್ಟೆ, ಊದುಬತ್ತಿ ಮೊದಲಾದ ವಸ್ತುಗಳನ್ನು ಸ್ಮಶಾನಕ್ಕೆ ತಂದು, ಅಲ್ಲಿಂದಲೇ ಅತ್ತೆಗೆ ಕಾಲ್ ಮಾಡಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಿ.ಸಿ.ರೋಡಿನ ರಾಜೇಶ್ (35) ಸಾವನ್ನಪ್ಪಿದಾತ. ಬಿ.ಸಿ.ರೋಡಿನ ಕೈಕುಂಜೆಯ ಹಿಂದೂ ರುದ್ರಭೂಮಿಯಲ್ಲಿ ಸೋಮವಾರ ಬೆಳಿಗ್ಗೆ ಘಟನೆ ನಡೆದಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಈ ಕೃತ್ಯ ಎಸಗಿರುವ ಈತ, ಪತ್ನಿ, ಇಬ್ಬರು ಮಕ್ಕಳನ್ನು ಹೊಂದಿದ್ದಾನೆ.

ಜಾಹೀರಾತು

ಅಂತ್ಯಕ್ರಿಯೆಗೆ ಬೇಕಾದ ಮಡಿಕೆ, ಬಿಳಿಬಟ್ಟೆ ಊದುಬತ್ತಿ ಮೊದಲಾದ ವಸ್ತುಗಳನ್ನು ಸ್ಮಶಾನಕ್ಕೆ ತಂದಿರಿಸಿ ಅಲ್ಲಿಂದಲೇ ತನ್ನ ಅತ್ತೆಗೆ ದೂರವಾಣಿ ಕರೆ ಮಾಡಿ ತಾನು ಸಾಯುವುದಾಗಿ ತಿಳಿಸಿ ಸ್ಮಶಾನದ ಮೇಲ್ಛಾವಣಿಯ ಕಬ್ಬಿಣದ ರಾಡಿಗೆ ನೇಣು ಬಿಗಿದು ಈ ಕೃತ್ಯ ಎಸಗಿದ್ದಾನೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ತೆರಳಿ ಶವದ ಮಹಜರು ನಡೆಸಿದ್ದು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ