ಸಂಗಬೆಟ್ಟು ಗ್ರಾಮದ ಗಾಡಿಪಲ್ಕೆ ಎಂಬಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸರಕಾರವು 50 ಲಕ್ಷ ರೂ ಅನುದಾನ ಮಂಜೂರು ಮಾಡಿದೆ ಎಂದು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.
ಗ್ರಾಮ ಮಟ್ಟದಲ್ಲಿ ನಿರ್ಮಿಸುವ ಭವನಗಳಿಗೆ 12 ಲಕ್ಷ ರೂ ಅನುದಾನ ನಿಗದಿಪಡಿಸಲಾಗಿದ್ದರೂ ಸ್ಥಳೀಯರ ಬೇಡಿಕೆಯಂತೆ 38 ಲಕ್ಷ ರೂ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಮಾಜ ಕಲ್ಯಾಣ ಇಲಾಖೆಯು ಅನುಮೋದನೆ ನೀಡಿದೆ. ಉಳಿ ಗ್ರಾಮದ ಕಕ್ಯಪದವು, ಪಿಲಿಮೊಗರು ಗ್ರಾಮದ ಬಸ್ತಿಕೋಡಿ ಎಂಬಲ್ಲಿ ಇದೇ ರೀತಿ ಮಂಜೂರಾತಿ ಪಡೆದ ರೂ. 50 ಲಕ್ಷ ವೆಚ್ಚದ ಅಂಬೇಡ್ಕರ್ ಭವನದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗಾಡಿಪಲ್ಕೆ ಅಂಬೇಡ್ಕರ್ ಭವನಕ್ಕೆ 50 ಲಕ್ಷ ರೂ ಅನುದಾನ: ರೈ"