ಬಂಟ್ವಾಳ

ಸಾಮಾಜಿಕ ಕ್ಷೇತ್ರಗಳಲ್ಲಿ ದುಡಿಯುವ ಸಂಸ್ಥೆಗೆ ಪ್ರೋತ್ಸಾಹ: ರಮಾನಾಥ ರೈ

www.bantwalnews.com

ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ  ಸ್ಥಳೀಯ ಸಂಸ್ಥೆಗಳನ್ನು ಪ್ರೋತ್ಸಾಹಿಸುವ ಕಾರ್ಯ ನಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಜಾಹೀರಾತು

ನರಿಕೊಂಬು, ನಾಯಿಲ ಓಂ ಶ್ರೀ ಗೆಳೆಯರ ಬಳಗದ 13ನೇ ವರ್ಷದ ವಾರ್ಷಿಕೋತ್ಸವ ಸಭಾಂಗಣದಲ್ಲಿ ಮಾತನಾಡಿದ ಅವರು, ಓಂ ಶ್ರೀ ಗೆಳೆಯರ ಬಳಗದ ಕಾರ್ಯ ಸಾಧನೆ ಶ್ಲಾಘನೀಯ ಎಂದರು.

ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್ ಮಾತನಾಡಿ ಯುವ ಜನರು ಸಾಂಘಿಕ ಸಮಾಜ ಸೇವೆಯ ಕಡೆಗೆ ಆಸಕ್ತಿ ವಹಿಸಬೇಕೆಂದು ತಿಳಿಸಿದರು.

ಜಾಹೀರಾತು

ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ನರಿಕೊಂಬು ನಾಗರಿಕ ಜಾಗೃತಿ ಸಮಿತಿಯ ಅಧ್ಯಕ್ಷ ಪ್ರಕಾಶ್ ಕಾರಂತ್, ಸತ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಲೋಕೇಶ್ ಪಿ.ಜೆ, ನರಿಕೊಂಬು ವಲಯ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ಬೋಳಂತೂರು, ನಾಯಿಲ ಯಕ್ಷಗಾನ ಬಯಲಾಟ ಸಮಿತಿ ಅಧ್ಯಕ್ಷ ಲಿಂಗಪ್ಪ ಕೊಟ್ಟಾರಿ, ಉದ್ಯಮಿ ಉಮೇಶ್ ನೆಲ್ಲಿಗುಡ್ಡೆ, ಗ್ರಾ.ಪಂ. ಸದಸ್ಯರಾದ ದೇವದಾಸ್ ಎಂ, ಚಂದ್ರಾವತಿ, ಓಂ ಸತ್ಯ ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ನಳಿನಿ ಉಮೇಶ್, ಓಂ ಶ್ರೀ ಗೆಳೆಯರ ಬಳಗದ ಅಧ್ಯಕ್ಷ ವಿಜಯ ಕುಲಾಲ್ ಉಪಸ್ಥಿತರಿದ್ದರು.

ಬಳಗದ ಸದಸ್ಯ ಶರತ್ ಸ್ವಾಗತಿಸಿ, ಪ್ರಣಾಮ್ ವಂದಿಸಿದರು. ದಿನೇಶ್ ಕೊಯಿಲ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಲಕುಮಿ ತಂಡದ ಕಲಾವಿದರಿಂದ ‘ಒವುಲಾ ಒಂತೆ ದಿನನೇ’ ತುಳು ಸಾಮಾಜಿಕ ನಾಟಕ ಪ್ರದರ್ಶನಗೊಂಡಿತು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ