ಕವನ ಜೀವನಾನುಭವದ ಸಂಭ್ರಮವಾಗಲಿ: ಕಲ್ಕೂರ

www.bantwalnews.com

ಜಾಹೀರಾತು

ಮಂಗಳೂರು: ಯುವ ಕವಿ, ಸಾಹಿತಿಗಳು ಬಹುಸಂಸ್ಕೃತಿಯ ಸಂಭ್ರಮ, ಜೀವನಾಭುವವನ್ನು ಕಾವ್ಯದ ಮೂಲದ ಸಂಭ್ರಮಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ ಕುಮಾರ್ ಎಸ್.ಕಲ್ಕೂರ ಸಲಹೆ ಮಾಡಿದರು.

ನಗರದ ನಾಸಿಕ್ ಬಿ.ಎಚ್.ಬಂಗೇರ ಸಭಾಭವನದಲ್ಲಿ ಬುಧವಾರ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಯೋಜಿಸಿದ್ದ ಕಾವ್ಯ ರಚನಾ ಕಮ್ಮಟ ಉದ್ಘಾಟಿಸಿ ಅವರು ಮಾತನಾಡಿದರು.

ಮೈಸೂರು ರಾಜರ ಕಾಲದಿಂದಲೂ ಸರಕಾರವು ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯ ಮಾಡುತ್ತಿದೆ. ಬ್ಯಾರಿ ಭಾಷೆ ಕೂಡಾ ತುಳುವಿನಷ್ಟೇ ಪುರಾತನ. ಸೀಮಿತ ಪ್ರದೇಶದಲ್ಲಿದ್ದರೂ ಭಾಷೆ, ಸಂಸ್ಕೃತಿ ಉಳಿಸಿಕೊಂಡು ಬಂದಿದೆ. ಯುವ ಮನಸ್ಸುಗಳು ಅಂತರ್‌ಜಾಲದ ವ್ಯಾಮೋಹಕ್ಕೆ ಬಲಿಯಾಗದೆ, ಪರಿಸರ, ಪ್ರವಾಸ ಕಥನಗಳ ಜೀವನ ಅನುಭವಗಳನ್ನು ಕಾವ್ಯದ ಮೂಲಕ ಜನಮನ ಗೆಲ್ಲಲಿ ಎಂದು ಕಲ್ಕೂರ ಹಾರೈಸಿದರು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮಹಮ್ಮದ್ ಅಧ್ಯಕ್ಷತೆ ವಹಿಸಿ, ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿ ಉಳಿಸುವ ಜವಾಬ್ದಾರಿ ಅಕಾಡೆಮಿಯದ್ದು. ಅದಕ್ಕೆ ಪೂರಕವಾಗಿ ಕಮ್ಮಟ, ಗೋಷ್ಠಿ ಏರ್ಪಡಿಸಿ, ಕಲಾವಿದರನ್ನು ಪ್ರೋತ್ಸಾಹಿಸುತ್ತೇವೆ. ಆಸಕ್ತರು ಅಕಾಡೆಮಿಯನ್ನು ಸಂಪರ್ಕಿಸಿದರೆ ಎಲ್ಲ ರೀತಿಯ ಸಹಕಾರ ನೀಡಲು ಬದ್ಧರಾಗಿದ್ದೇವೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಮಲ್ಲಿಪಟ್ಣ ಮತ್ತು ಬಹುಭಾಷಾ ಕವಿ ಮುಹಮ್ಮದ್ ಬಡ್ಡೂರು ಭಾಗವಹಿಸಿ, ಪ್ರತಿನಿಧಿಗಳ ಜತೆ ಸಂವಾದ ಮೂಲಕ ಕಾವ್ಯ ರಚನೆ ಬಗ್ಗೆ ಉಪನ್ಯಾಸ ನೀಡಿದರು.

೫೦ಕ್ಕೂ ಹೆಚ್ಚು ಮಂದಿ ಪ್ರತಿನಿಧಿಗಳು ಭಾಗವಹಿಸಿದ್ದರು. ಅವರಿಗೆ ಕವನ ರಚನಾ ಸ್ಪರ್ಧೆ ಆಯೋಜಿಸಲಾಗಿತ್ತು. ಅಕಾಡೆಮಿ ಅಧ್ಯಕ್ಷ ಕರಂಬಾರ್ ಮಹಮ್ಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಅಬುದಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್  ಭಾಗವಹಿಸಿ, ವಿಜೇತರಿಗೆ ಬಹುಮಾನ ವಿತರಿಸಿದರು.

ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್., ಮೇಲ್ತೆನೆ ಸಂಘಟನೆ ಗೌರವಾಧ್ಯಕ್ಷ ಆಲಿ ಕುಂಞಿ ಪಾರೆ, ಸಾಹಿತಿ ಯು.ಎ.ಕಾಸಿಂ ಉಳ್ಳಾಲ, ಶಂಸುದ್ದೀನ್ ಮಡಿಕೇರಿ, ಅಕಾಡೆಮಿ ಸದಸ್ಯರಾದ ಆಯಿಷಾ ಯು.ಕೆ., ಬಶೀರ್ ಬೈಕಂಪಾಡಿ, ಪಿ.ಎಂ.ಹಸನಬ್ಬ ಮೂಡುಬಿದಿರೆ, ಬಶೀರ್ ಅಹ್ಮದ್ ಕಿನ್ಯ, ಎಸ್.ಎಂ.ಶರೀಫ್ ಮಡಿಕೇರಿ, ತನ್ಸೀಫ್ ಬೆಳ್ತಂಗಡಿ, ಅನ್ಸಾರ್ ಬೆಳ್ಳಾರೆ, ಸಲೀಂ ಬರಿಮಾರು ಉಪಸ್ಥಿತರಿದ್ದರು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಹುಸೇನ್ ಕಾಟಿಪಳ್ಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸದಸ್ಯ ಮೊಹಮ್ಮದ್ ಮುಹಮ್ಮದ್ ಆರಿಫ್ ಪಡುಬಿದ್ರಿ ವಂದಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕವನ ಜೀವನಾನುಭವದ ಸಂಭ್ರಮವಾಗಲಿ: ಕಲ್ಕೂರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*