ಚಿನ್ನದ ಪದಕ ವಿಜೇತನಿಗೆ ಸನ್ಮಾನ

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ದಕ್ಷಿಣ ವಲಯ ಟ್ವೇಕಾಂಡೋ ಕ್ರೀಡಾಕೂಟದಲ್ಲಿ 2 ಚಿನ್ನದ ಪದಕ ಪಡೆದ ಬಂಟ್ವಾಳ ತೌಹೀದ್ ಆಂಗ್ಲಮಾಧ್ಯಮ ಶಾಲೆಯ 7ನೇ ತರಗತಿ ವಿಧ್ಯಾರ್ಥಿ ರೈಫಾನ್ ಅಹಮದ್ ಗೆ ಬಿ.ಸಿ. ರೋಡ್ ಶಾಂತಿಅಂಗಡಿಯಲ್ಲಿ ಸನ್ಮಾನಿಸಲಾಯಿತು.

ಜಾಹೀರಾತು

ಟೈಗರ್ ಫ್ರೆಂಡ್ಸ್ ಇಲೆವನ್ ಹಾಗೂ ಕಟ್ಟೆ ಫ್ರೆಂಡ್ಸ್ ಶಾಂತಿಅಂಗಡಿ ವತಿಯಿಂದ ಸಮಾರಂಭ ಏರ್ಪಡಿಸಲಾಗಿತ್ತು. ಬಂಟ್ವಾಳ ಪುರಸಭಾ ಸದಸ್ಯ ಶರೀಫ್, ಕಟ್ಟೆ ಫ್ರೆಂಡ್ಸ್ ಕಪ್ತಾನ ಮಜ್ಜಿ ಪಳ್ಳ, ಟೈಗರ್ ಇಲೆವನ್ ಕಪ್ತಾನ ಹಬೀಬ್ ಚಾಂದ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

ಶಾಂತಿಅಂಗಡಿ ಊರಿನ ಬಾಲಕ ರೈಫಾನ್ ರಾಜ್ಯಮಟ್ಟದಲ್ಲಿ 2 ಚಿನ್ನದ ಪದಕ ಗಳಿಸುವ ಮೂಲಕ ಊರಿಗೆ ಕೀರ್ತಿ ತಂದಿದ್ದಾನೆ. ಇವನ ಸಾಧನೆ ಇನ್ನಷ್ಟು ಎತ್ತರಕ್ಕೇರಲಿ ಎಂದು ಮುಖ್ಯ ಅತಿಥಿಯಾಗಿದ್ದ ಪುರಸಭಾ ಸದಸ್ಯ ಶರೀಫ್ ಹಾರೈಸಿದರು. ಇದೇ ಸಂದರ್ಭದಲ್ಲಿ ಶಾಲು ಹೊದಿಸಿ, ನೆನಪಿನ ಫಲಕ, ನಗದು ನೀಡಿ ಸನ್ಮಾನಿಸಲಾಯಿತು.

ಜನವರಿಯಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಿದ ಒಲಿಂಪಿಕ್ ಮಾರ್ಷಲ್ ಆರ್ಟ್ ಟ್ವೇಕಾಂಡೋ ಕ್ರೀಡೆಯಲ್ಲಿ 36 ಕೆ.ಜಿ. ವಿಭಾಗದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ರೈಫಾನ್, ಅತ್ಯುತ್ತಮ ಪ್ರದರ್ಶನ ನೀಡಿ ಎರಡು ಚಿನ್ನದ ಪದಕ ಗಳಿಸಿದ್ದಾನೆ.

ಬಿ.ಸಿ. ರೋಡ್ ಕೈಕಂಬ (ಕೆ.ಎಸ್.ಆರ್.ಟಿ.ಸಿ. ಡಿಪೋ ಸಮೀಪದ) ನಿವಾಸಿಗಳಾಗಿರುವ ಮುಹಮ್ಮದ್ ರಫೀಕ್ ಮತ್ತು ಫಾತಿಮಾ ಜೊಹರಾ ದಂಪತಿಯ ಪುತ್ರನಾಗಿರುವ ರೈಫಾನ್ ಅಹಮದ್, ದ.ಕ. ಜಿಲ್ಲಾ ಟ್ವೇಕಾಂಡೋ ಅಸೋಸಿಯೇಶನ್‍ನ ತರಬೇತುದಾರ ಇಸಾಕ್ ನಂದಾವರ ಅವರಲ್ಲಿ ತರಬೇತಿ ಪಡೆಯುತ್ತಿದ್ದಾನೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಚಿನ್ನದ ಪದಕ ವಿಜೇತನಿಗೆ ಸನ್ಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*