ಬಂಟ್ವಾಳ

ಚಿನ್ನದ ಪದಕ ವಿಜೇತನಿಗೆ ಸನ್ಮಾನ

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ದಕ್ಷಿಣ ವಲಯ ಟ್ವೇಕಾಂಡೋ ಕ್ರೀಡಾಕೂಟದಲ್ಲಿ 2 ಚಿನ್ನದ ಪದಕ ಪಡೆದ ಬಂಟ್ವಾಳ ತೌಹೀದ್ ಆಂಗ್ಲಮಾಧ್ಯಮ ಶಾಲೆಯ 7ನೇ ತರಗತಿ ವಿಧ್ಯಾರ್ಥಿ ರೈಫಾನ್ ಅಹಮದ್ ಗೆ ಬಿ.ಸಿ. ರೋಡ್ ಶಾಂತಿಅಂಗಡಿಯಲ್ಲಿ ಸನ್ಮಾನಿಸಲಾಯಿತು.

ಜಾಹೀರಾತು

ಟೈಗರ್ ಫ್ರೆಂಡ್ಸ್ ಇಲೆವನ್ ಹಾಗೂ ಕಟ್ಟೆ ಫ್ರೆಂಡ್ಸ್ ಶಾಂತಿಅಂಗಡಿ ವತಿಯಿಂದ ಸಮಾರಂಭ ಏರ್ಪಡಿಸಲಾಗಿತ್ತು. ಬಂಟ್ವಾಳ ಪುರಸಭಾ ಸದಸ್ಯ ಶರೀಫ್, ಕಟ್ಟೆ ಫ್ರೆಂಡ್ಸ್ ಕಪ್ತಾನ ಮಜ್ಜಿ ಪಳ್ಳ, ಟೈಗರ್ ಇಲೆವನ್ ಕಪ್ತಾನ ಹಬೀಬ್ ಚಾಂದ್ ಮತ್ತಿತರರು ಉಪಸ್ಥಿತರಿದ್ದರು.

ಶಾಂತಿಅಂಗಡಿ ಊರಿನ ಬಾಲಕ ರೈಫಾನ್ ರಾಜ್ಯಮಟ್ಟದಲ್ಲಿ 2 ಚಿನ್ನದ ಪದಕ ಗಳಿಸುವ ಮೂಲಕ ಊರಿಗೆ ಕೀರ್ತಿ ತಂದಿದ್ದಾನೆ. ಇವನ ಸಾಧನೆ ಇನ್ನಷ್ಟು ಎತ್ತರಕ್ಕೇರಲಿ ಎಂದು ಮುಖ್ಯ ಅತಿಥಿಯಾಗಿದ್ದ ಪುರಸಭಾ ಸದಸ್ಯ ಶರೀಫ್ ಹಾರೈಸಿದರು. ಇದೇ ಸಂದರ್ಭದಲ್ಲಿ ಶಾಲು ಹೊದಿಸಿ, ನೆನಪಿನ ಫಲಕ, ನಗದು ನೀಡಿ ಸನ್ಮಾನಿಸಲಾಯಿತು.

ಜನವರಿಯಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಿದ ಒಲಿಂಪಿಕ್ ಮಾರ್ಷಲ್ ಆರ್ಟ್ ಟ್ವೇಕಾಂಡೋ ಕ್ರೀಡೆಯಲ್ಲಿ 36 ಕೆ.ಜಿ. ವಿಭಾಗದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ರೈಫಾನ್, ಅತ್ಯುತ್ತಮ ಪ್ರದರ್ಶನ ನೀಡಿ ಎರಡು ಚಿನ್ನದ ಪದಕ ಗಳಿಸಿದ್ದಾನೆ.

ಬಿ.ಸಿ. ರೋಡ್ ಕೈಕಂಬ (ಕೆ.ಎಸ್.ಆರ್.ಟಿ.ಸಿ. ಡಿಪೋ ಸಮೀಪದ) ನಿವಾಸಿಗಳಾಗಿರುವ ಮುಹಮ್ಮದ್ ರಫೀಕ್ ಮತ್ತು ಫಾತಿಮಾ ಜೊಹರಾ ದಂಪತಿಯ ಪುತ್ರನಾಗಿರುವ ರೈಫಾನ್ ಅಹಮದ್, ದ.ಕ. ಜಿಲ್ಲಾ ಟ್ವೇಕಾಂಡೋ ಅಸೋಸಿಯೇಶನ್‍ನ ತರಬೇತುದಾರ ಇಸಾಕ್ ನಂದಾವರ ಅವರಲ್ಲಿ ತರಬೇತಿ ಪಡೆಯುತ್ತಿದ್ದಾನೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಬಿ.ವಿ.ಕಾರಂತ ಹುಟ್ಟಿದ ತಾಲೂಕಲ್ಲಿ ಸುಸಜ್ಜಿತ ರಂಗಮಂದಿರವೇ ಇಲ್ಲ

| ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ಪರದಾಟ | ತಾಲೂಕು ಕೇಂದ್ರದಲ್ಲಿ ಜಾಗವೇ ದೊರಕಿಲ್ಲ (more…)

15 hours ago