ಕವಿ, ಸಾಹಿತಿ ಚಂದ್ರಶೇಖರ ಪಾತೂರು ಅವರ ಅಂಕಣ ಬರಹಗಳ ಸಂಕಲನ ಬದುಕಿನ ಬೆಲೆಯೇನಾದರೂ ಬಲ್ಲಿರಾ ಪುಸ್ತಕವನ್ನು ಫೆ.25ರಂದು ಭಾನುವಾರ ಮಧ್ಯಾಹ್ನ 3.30ಕ್ಕೆ ಬಂಟ್ವಾಳದ ಐಬಿ ಬಳಿ ಇರುವ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ಸಚಿವ ಬಿ.ರಮಾನಾಥ ರೈ ಬಿಡುಗಡೆಗೊಳಿಸುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೇಖಕ, ಪ್ರಾಧ್ಯಾಪಕ ಡಾ. ನರೇಂದ್ರ ರೈ ದೇರ್ಲ ವಹಿಸುವರು. ಪ್ರಕಾಶಕ ಕಲ್ಲೂರು ನಾಗೇಶ ಉಪಸ್ಥಿತರಿರುವರು ಎಂದು ಕಾರ್ಯಕ್ರಮ ಆಯೋಜಕರಾದ ಚಿತ್ತಾರ ಬಳಗದ ಸತೀಶ್ ಇರಾ ಮತ್ತು ಆಕೃತಿ ಆಶಯ ಪಬ್ಲಿಕೇಶನ್ಸ್ ಪ್ರಕಟಣೆ ತಿಳಿಸಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)