ಕಲ್ಲಡ್ಕ

ದೇಶಭಕ್ತಿಯ ಕೊರತೆಯಿಂದ ವಿದೇಶಿ ಆಕ್ರಮಣ: ಡಾ. ಪ್ರಭಾಕರ ಭಟ್

 

ದೇಶದ ಜನರಲ್ಲಿ ದೇಶಭಕ್ತಿಯ ಕೊರತೆ ಇರುವ ಕಾರಣ ವಿದೇಶೀ ಆಕ್ರಮಣಗಳು ನಡೆದಿವೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ಜಾಹೀರಾತು

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ದೀಪಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರಭಕ್ತಿಯನ್ನು ಉದ್ದೀಪನಗೊಳಿಸುವ ಸಂಸ್ಕಾರಯುತ ಶಿಕ್ಷಣವನ್ನು ಸಂಸ್ಥೆ ನೀಡುತ್ತಿದೆ. ಈ ಶಿಕ್ಷಣವನ್ನು ಜೀವನದಲ್ಲಿ ಪ್ರತಿಯೊಂದು ವಿದ್ಯಾರ್ಥಿಯು ಅಳವಡಿಸಿಕೊಂಡು ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಆಶಿಸಿದರು.

ವಿದ್ಯಾಕೇಂದ್ರ ಇನ್ನಷ್ಟು ರಾಷ್ಟ್ರಭಕ್ತ ವ್ಯಕ್ತಿತ್ವ ಹೊಂದಿರುವ ವಿದ್ಯಾರ್ಥಿಗಳನ್ನು ನಿರ್ಮಾಣಗೊಳಿಸಲಿ ಎಂದು ಡಾ|ನಿಮ್ಮಿ ಶೆಟ್ಟಿ ಬೆಂಗಳೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಕೇಂದ್ರ ಅಧ್ಯಕ್ಷ ಬಿ. ನಾರಾಯಣ ಸೋಮಯಾಜಿ ವಹಿಸಿದ್ದರು.

ಜಾಹೀರಾತು

ಬೆಂಗಳೂರಿನ ಉದ್ಯಮಿ ಹರಿರಾಜ ಶೆಟ್ಟಿ, ಡಾ. ನಿಮ್ಮಿ ಶೆಟ್ಟಿ, ಜಿಪಂ ಮಾಜಿ ಸದಸ್ಯ ಸುಬ್ರಹ್ಮಣ್ಯ ಶಾಸ್ತ್ರೀ, ಶ್ರೀಕಲಾ ಶಾಸ್ತ್ರಿ, ಶಿವಕುಮಾರ ಗೌಡ, ಅಶೋಕ್ ಕುಮಾರ್, ಪ್ರದೀಪ್, ನಿವೃತ್ತ ಸೈನಿಕ ಪವನ್ ಆಂಜಯ್ಯ, ಡಾ. ಕಮಲಾ ಪ್ರಭಾಕರ ಭಟ್ ಕಲ್ಲಡ್ಕ, ಶ್ರೀರಾಮ ವಿದ್ಯಾಕೇಂದ್ರ ಸಂಚಾಲಕ ವಸಂತ ಮಾಧವ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 10ನೇ ತರಗತಿ ವಿದ್ಯಾರ್ಥಿಗಳು ಭಾರತಮಾತೆಗೆಅರ್ಚನೆಗೈದು ಹಿರಿಯರಿಂದ ತಿಲಕಧಾರಣೆ ಹಾಗೂ ಆಶಿರ್ವಾದ ಪಡೆದರು

10ನೇ ತರಗತಿ ವಿದ್ಯಾರ್ಥಿ ಪ್ರಮುಖರು 9ನೇ ತರಗತಿ ವಿದ್ಯಾರ್ಥಿಗಳಿಗೆ ದೀಪಪ್ರದಾನಗೈದು, ಸಂಚಾಲಕರಿಗೆ ೨೦೧೭-೧೮ನೇ ಶೈಕ್ಷಣಿಕ ವರುಷದಕೊಡುಗೆ ನೀಡಿದರು.

ಜಾಹೀರಾತು

ಸಹಶಿಕ್ಷಕ ಜಿನ್ನಪ್ಪ ಸ್ವಾಗತಿಸಿದರು. ಹರ್ಷಿತಾ, ಜಯಂತ ಶೆಟ್ಟಿ, ಸುಶ್ಮಿತಾ ಅನಿಸಿಕೆ ವ್ಯಕ್ತಪಡಿಸಿದರು. ವೈಷ್ಣವಿ ಪ್ರಭು ಆಶಯ ಗೀತೆ ಹಾಡಿದರು. ಸಹಶಿಕ್ಷಕ ಮನೋಜ್ ವಂದಿಸಿದರು. ಶಾಂಭವಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ