ಸಾಮಾಜಿಕ ಸಾಮರಸ್ಯ ಸಮಾಜದಲ್ಲಿ ಅನಿವಾರ್ಯವಾಗಿದೆ. ರಕ್ತದಾನದ ಮೂಲಕ ಸಮಾಜದಲ್ಲಿ ಸಾಮರಸ್ಯ ವೃದ್ಧಿಯಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಹೇಳಿದರು.

ಜಾಹೀರಾತು

ಅವರು ಭಾನುವಾರ ಇಂಡಿಯಾನ್ ರೆಡ್ಕ್ರಾಸ್ ಸೊಸೈಟಿ, ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಹಾಗೂ ಎಸ್ಎಸ್ಎಫ್ ಎನ್.ಸಿ ರೋಡ್ ಶಾಖೆ ವತಿಯಿಂದ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ವಿವಿಧ ರೀತಿಯ ಸಮಸ್ಯೆಗಳಿದ್ದು, ಅವುಗಳನ್ನು ಮೀರಿ ಮುಂದೆ ಹೋಗಬೇಕು. ದೇಶದಲ್ಲಿ ವಿವಿಧ ರೀತಿಯ ಜಾತಿ ಭಾಷೆಯ ಜನಗಳಿದ್ದು, ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದಾರೆ. ಇಂತಹ ಕಾರ್ಯಕ್ರಮಗಳ ಮೂಲಕ ಎಲ್ಲಾ ಧರ್ಮಿಯರನ್ನು ಒಗ್ಗೂಡಿಸಲು ಸಾಧ್ಯ ಎಂದು ತಿಳಿಸಿದರು.

ಅಸ್ಸಯ್ಯದ್ ಶಿಹಾಬುದ್ದೀನ್ ತಂಙಳ್ ದುವಾ ಆಶೀರ್ವಚನ ನೀಡಿದರು. ಶಿಬಿರದಲ್ಲಿ 80 ಮಂದಿ ರಕ್ತದಾನ ಮಾಡಿದರು.

ಜಾಹೀರಾತು

ಸಂದರ್ಭ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ರೆಡ್ಕ್ರಾಸ್ ಸೊಸೈಟಿಯ ಎಡ್ವರ್ಡ್ ದಾಸ್, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಯುವ ಕಾಂಗ್ರೆಸ್ ಅಧ್ಯಕ್ಷ ಚಿತ್ತರಂಜನ್ ಶೆಟ್ಟಿ, ಅಬ್ದುಲ್ ನಾಸೀರ್ ಮಾಸ್ಟರ್, ಸಿ.ಎಚ್ ಅಬೂಬಕ್ಕರ್ ಸೆರ್ಕಳ, ಇಬ್ರಾಹಿಂ ಖಲೀಲ್, ಮುತ್ತಲಿಬ್ ಹಾಜಿ, ಇಬ್ರಾಹಿಂ ಖಂಡಿಗ, ಇಬ್ರಾಹಿಂ ಸಖಾಫಿ ಸೆರ್ಕಳ, ಸಿದ್ದೀಕ್ ಸಅದಿ, ಅಬ್ಬಾಸ್ ಮುಸ್ಲಿಯಾರ್ ಎನ್.ಸಿ ರೋಡ್, ಎಸ್.ಎಂ ಅಬೂಬಕ್ಕರ್ ಸುರಿಬೈಲು, ರಫೀಕ್ ಮಾಡದ ಬಳಿ, ಝಕಾರಿಯಾ ನಾರ್ಶ, ಸಿ.ಎಚ್ ರಝಾಕ್ ಸೆರ್ಕಳ, ಅಬ್ದುಲ್ಲ ನಾರಂಕೋಡಿ, ಅಬ್ದುಲ್ ಕರೀಂ ಕದ್ಕರ್, ಮಹಮ್ಮದ್ ಗಝಾಲ್ ಕುಡ್ತಮುಗೇರು ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ