ಸಸ್ಪೆನ್ಸ್ ಥ್ರಿಲ್ಲರ್ ಸ್ಟೋರಿ – ನಿಲುಕದ ನಕ್ಷತ್ರ ತೆರೆಗೆ ಬರಲು ಸಿದ್ಧ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ರುದಿರಾ ಫಿಲ್ಮ್ಸ್ ಬ್ಯಾನರ್ ನಲ್ಲಿ ನಿಲುಕದ ನಕ್ಷತ್ರ ತೆರೆಗೆ ಬರಲು ಸಿದ್ಧವಾಗುತ್ತಿದೆ.

ಇದರಲ್ಲೇನು ವಿಶೇಷ?

ಜಾಹೀರಾತು

ಬಂಟ್ವಾಳ ತಾಲೂಕು ಸಹಿತ ದ.ಕ.ಜಿಲ್ಲೆ ಹಾಗೂ ಕರಾವಳಿಯ ಪ್ರತಿಭೆಗಳ ಸಂಗಮದಲ್ಲಿ ಮೂಡಿಬಂದಿದೆ ನಿಲುಕದ ನಕ್ಷತ್ರ ಚಿತ್ರ.

ಬಹು ನಿರೀಕ್ಷಿತ ಈ ಚಿತ್ರದ ಶೂಟಿಂಗ್ ಸಂಪೂರ್ಣಗೊಂಡಿದ್ದು, ಇದೀಗ ಬಿಡುಗಡೆಯ ಹಾದಿಯಲ್ಲಿದೆ. ವಿಭಿನ್ನ ಕಥಾಹಂದರ ಹೊಂದಿರುವ, ನೈಜ ನಿರೂಪಣೆಯೊಂದಿಗೆ ಹೊಸತನವಿರುವ ಈ ಚಿತ್ರವು ಎಲ್ಲಾ ವರ್ಗದ ಪ್ರೇಕ್ಷಕರ ಮನ ಮುಟ್ಟಲಿದೆ ಎಂಬುದು ಚಿತ್ರತಂಡದ ಹೇಳಿಕೆ.

ಹೊಸ ಪ್ರತಿಭೆಗಳೇ ಅಭಿನಯಿಸಿರುವ ಈ ಚಿತ್ರಕ್ಕೆ ಆನಂದ್ ಅನಿ ಬೆಂಗಳೂರು, ವಿನ್ಸೆಂಟ್ ಡಿಸೋಜ ಹಾಗೂ ಸುಶಾನ್ ರೈ ಮಾವಿನಕಟ್ಟೆ ನಿರ್ಮಾಪಕರಾಗಿದ್ದು, ಧನರಾಜ್ ಶೆಟ್ಟಿ ಮತ್ತು ಪ್ರಸನ್ನ ಎಸ್ ಬಲ್ಮಠ ಸಹ ನಿರ್ಮಾಪಕರಾಗಿದ್ದಾರೆ.

ಜಾಹೀರಾತು

ಇಂಪಾದ ಸಂಗೀತದೊಂದಿಗೆ 6 ಹಾಡುಗಳಿದ್ದು, ಸಾಹಿತ್ಯವನ್ನು ಗಣಿ ದೇವ್ ಕಾರ್ಕಳ ಹಾಗೂ ದೀಪಕ್ ಶೆಟ್ಟಿ ಬರೆದಿದ್ದಾರೆ. ಸಂಗೀತದ ಜೊತೆಗೆ ಚಿತ್ರ ಕಥೆ ಹಾಗೂ ನಿರ್ದೇಶನವನ್ನು ಸ್ವತಃ ಗಣಿ ದೇವ್ ಕಾರ್ಕಳ ಅವರೇ ನಿರ್ವಹಿಸಿದ್ದಾರೆ.

ಕರಾವಳಿಯ ಸುಂದರ ತಾಣಗಳಲ್ಲಿ ಚಿತ್ರೀಕರಣಗೊಂಡ ಈ ಚಿತ್ರದ ಛಾಯಾಗ್ರಹಕರಾಗಿ ಸುರೇಂದ್ರ ಪಣಿಯೂರು ಕಾರ್ಯನಿರ್ವಹಿಸಿದ್ದಾರೆ. ಹೀಗೆ ಎಲ್ಲಾ ಹೊಸ ಪ್ರತಿಭೆಗಳ ನಟನಾ ವಿಭಾಗ ಹಾಗೂ ತಂತ್ರಜ್ಞರನ್ನು ಹೊಂದಿರುವ ಈ ಚಿತ್ರ ತನ್ನ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ಜಾಹೀರಾತು

ಈ ವಿಭಿನ್ನ ಚಿತ್ರದ ತಾರಾಗಣದಲ್ಲಿ ಪವನ್ ಆರ್ಯ,ಸುಶ್ಮಿತಾ ರೈ, ಅಭಿಲಾಶ್ ಕುಲಾಲ್, ಪ್ರಜನ್ ರೈ, ಅಭಿನೇತ್ರಿ ಜೈನ್, ಸ್ವಾತಿ ಶೆಟ್ಟಿ, ಯತೀಶ್ ಹಾಗೂ ಶರಣ್ ಅಭಿನಯಿಸಿದ್ದು ಸಹಾಯಕ ನಿರ್ದೇಶಕರಾಗಿ ಸುಶಾನ್ ರೈ ಮಾವಿನಕಟ್ಟೆ ಹಾಗೂ ಕಾರ್ಯಕಾರಿ ನಿರ್ದೇಶಕರಾಗಿ ಕವಿತಾ ಕನ್ನಿಕಾ ಪೂಜಾರಿ ಹಾಗೂ ಕಿಶನ್ ರೈ ಮಡಿಕೇರಿ ಕಾರ್ಯ ನಿರ್ವಹಿಸಿದ್ದಾರೆ. ಹಾಗೆಯೇ ಈ ಚಿತ್ರದ ಬಹುಪಾಲು ಚಿತ್ರೀಕರಣವು ಕರಾವಳಿಯ ಸುಂದರ ಭಾಗಗಳು ಹಾಗೂ ಬೆಂಗಳೂರಿನಲ್ಲಿ ನಡೆದಿದ್ದು ಚಿತ್ರದ ಗುಣಮಟ್ಟದಲ್ಲಿ ರಾಜಿಯಾಗದ ಚಿತ್ರತಂಡ ಉನ್ನತ ಮಟ್ಟದ ತಂತ್ರಜ್ಞಾನ ಬಳಸಿಕೊಂಡಿದೆ. ಹಾಗೂ ಗ್ರೀನ್ ಸ್ಕ್ರೀನ್ ವಿಎಫ್ಎಕ್ಸ್ ಕೂಡ ಬಳಸಿ ಉತ್ತಮ ದರ್ಜೆಯ ಕನ್ನಡ ಚಲನಚಿತ್ರವನ್ನು ಪ್ರೇಕ್ಷಕ ಮಹಾಪ್ರಭುವಿನ ಮುಂದಿಡಲು ಪ್ರಾಮಾಣಿಕ ಪ್ರಯತ್ನ ಮಾಡಿದೆ. ವಿಭಿನ್ನತೆಯಲ್ಲೇ ಆರಂಭವಾಗುವ ಈ ಚಿತ್ರ ಅನೇಕ ತಿರುವುಗಳಿಂದ ಕೂಡಿದ್ದು ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಇಂದಿನ ಸಮಾಜದ ವಾಸ್ತವತೆಯನ್ನು ತೋರಿಸಲಿದೆ, ಈ ರೀತಿಯ ಕಥೆ ದಕ್ಷಿಣ
ಭಾರತದ ಚಿತ್ರರಂಗದಲ್ಲಿ ಇದುವರೆಗೆ ಬಂದಿಲ್ಲ, ಇದು ಚಿತ್ರರಸಿಕರ ಮನಗೆಲ್ಲಲಿದೆ ಎಂದು ಚಿತ್ರದ ನಿರ್ದೇಶಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಾಹೀರಾತು

ಈಗಾಗಲೇ ಚಿತ್ರದ ಪೋಸ್ಟರ್ಗಳು ಬಿಡುಗಡೆಗೊಂಡು ಅಂತರ್ಜಾಲದಲ್ಲಿ ವೈರಲ್ ಆಗಿದೆ. ವಿಚಿತ್ರ ಅವತರಣಿಕೆಯ ಪೋಸ್ಟರ್’ನಲ್ಲೇ ಕಥೆಯ ನಿಗೂಢತೆ ತೆರೆದುಕೊಂಡಂತೆ ಗೋಚರಿಸುತ್ತಿದ್ದು, ಜನರಲ್ಲಿ ಕುತೂಹಲ ಮೂಡಿಸಿದೆ. ಸಂಪೂರ್ಣವಾಗಿ ಹೊಸಬರ ಚಿತ್ರ ಎನ್ನುವ ಹಿರಿಮೆಯೂ ಇರುವ ಈ ಚಿತ್ರದಲ್ಲಿ ಎಲ್ಲ ವಿಭಾಗದಲ್ಲೂ ಹೊಸಬರ ಹೊಸತನದ ಪ್ರತಿಭೆಯ ಅನಾವರಣವಾಗಿರುವುದು ಚಿತ್ರದ ಮತ್ತೊಂದು ವಿಶೇಷ..!!

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಸ್ಪೆನ್ಸ್ ಥ್ರಿಲ್ಲರ್ ಸ್ಟೋರಿ – ನಿಲುಕದ ನಕ್ಷತ್ರ ತೆರೆಗೆ ಬರಲು ಸಿದ್ಧ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*