ನೇತ್ರಾವತಿ ನದಿಯ ಒಂದು ದಂಡೆಯಲ್ಲಿ ಅಜಿಲಮೊಗರು ದರ್ಗಾ ಮತ್ತು ಇನ್ನೊಂದು ಕಡೆ ಕಡೇಶ್ವಾಲ್ಯ ಶ್ರೀ ಚಿಂತಾಮಣಿ ಲಕ್ಷ್ಮೀನರಸಿಂಹ ದೇವಸ್ಥಾನಗಳಿರುವ ಪ್ರದೇಶದಲ್ಲಿ 31 ಕೋಟಿ ರೂ ವೆಚ್ಚದ ಸೇತುವೆ ನಿರ್ಮಾಣದ ಭೂಮಿಪೂಜೆ ಹಿನ್ನೆಲೆಯಲ್ಲಿ ಸಚಿವ ಬಿ.ರಮಾನಾಥ ರೈ ಕಡೇಶ್ವಾಲ್ಯ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ಪ್ರಾರ್ಥನೆ ಸಲ್ಲಿಸಿದರು. ಸಂಜೆ ಅಜಿಲಮೊಗರು ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಜಾಹೀರಾತು
ಎರಡೂ ಧರ್ಮಗಳ ಜನರಿಗೂ ಈ ಸೇತುವೆ ನಿರ್ಮಾಣದಿಂದ ಅನುಕೂಲವಾಗುವುದಲ್ಲದೆ, ಬಾಂಧವ್ಯ ವೃದ್ಧಿಗೂ ಇದು ಪೂರಕವಾಗಲಿದೆ ಎಂದು ರೈ ಈ ಸಂದರ್ಭ ತಿಳಿಸಿದರು. ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಸಂಪತ್ಕುಮಾರ್ ಶೆಟ್ಟಿ ಮೊದಲಾದವರು ಈ ಸಂದರ್ಭ ಹಾಜರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಡೇಶ್ವಾಲ್ಯ ದೇವಸ್ಥಾನ, ಅಜಿಲಮೊಗರು ದರ್ಗಾದಲ್ಲಿ ರೈ ಪ್ರಾರ್ಥನೆ"