ಶೀಘ್ರ ಸ್ವಂತ ನಿವೇಶನದಲ್ಲಿ ಆರ್.ಟಿ.ಒ. ಕಚೇರಿ: ರಮಾನಾಥ ರೈ

ಆರ್.ಟಿ.ಓ. ಕಚೇರಿಯ ಸ್ವಂತ ಕಟ್ಟಡಕ್ಕೆ ನಿವೇಶನ ಒದಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಜಾಹೀರಾತು

ಬಂಟ್ವಾಳ ತಾಲೂಕಿನ ಮೇಲ್ಕಾರ್ ನಲ್ಲಿರುವ ಬಿರ್ವ ಟವರ್ಸ್ ನಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಚೇರಿಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಜನರ ಹಿತ ಕಾಪಾಡುವ ಕೆಲಸಗಳು ಇಂದು ಆಗಬೇಕಿದ್ದು, ಆರ್.ಟಿ.ಒ. ಕಚೇರಿಯಲ್ಲಿ ಸುಸಜ್ಜಿತ ವ್ಯವಸ್ಥೆ ಮತ್ತು ಪೂರ್ಣಕಾಲಿಕ ಸಿಬ್ಬಂದಿ ಕಾರ್ಯಾಚರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ರೊಡ್ರಿಗಸ್, ಬಂಟ್ವಾಳ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಕಟ್ಟಡ ಮಾಲೀಕ, ತಾಪಂ ಸದಸ್ಯ ಸಂಜೀವ ಪೂಜಾರಿ, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ರಾಜವರ್ಮ ಬಲ್ಲಾಳ್, ಸಾರಿಗೆ ಮತ್ತು ರಸ್ತೆ ಸುರಕ್ಷತ ಆಯುಕ್ತ ಬಿ.ದಯಾನಂದ, ಜಂಟಿ ಸಾರಿಗೆ ಆಯುಕ್ತೆ ಎಂ. ಪಿ. ಓಂಕಾರೇಶ್ವರಿ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್. ಹೆಗಡೆ, ಶಿವಮೊಗ್ಗ ವಿಭಾಗದ ಜಂಟಿ ಸಾರಿಗೆ ಆಯುಕ್ತ  ಬಿ.ಶಿವರಾಜ ಪಾಟೀಲ ಉಪಸ್ಥಿತರಿದ್ದರು. ಎ.ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು. ಸಾರಿಗೆ ಆಯುಕ್ತರಾದ ಬಿ.ದಯಾನಂದ ಅವರು ಪ್ರಸ್ತಾವಿಸಿ,ಸ್ವಾಗತಿಸಿದರು. ಇದೇ ವೇಳೆ ಸಾಂಕೇತಿಕವಾಗಿ ಸ್ಮಾಟ್೯ ಕಾಡ್೯ಪರವಾನಿಗೆ ,ಆರ್. ಸಿ.ಯನ್ನು ವಿತರಿಸಲಾಯಿತು. ನೂತನವಾಗಿ ಆರಂಭವಾಗಿರುವ ಬಂಟ್ವಾಳ  ಸಹಾಯಕ ಪ್ರಾದೇಶಿಕ ಸಾರಿಗೆಕಚೇರಿಯಲ್ಲಿ ನೋಂದಣಿಯಾಗುವ ವಾಹನಗಳು  ಕೆಎ-70 ಸಂಖ್ಯೆಯಲ್ಲಿ ರಸ್ತೆಗಿಳಿಯಲಿವೆ. ಒಟ್ಟು 9 ಸಿಬ್ಬಂದಿಯುಳ್ಳ ಕಚೇರಿಯಿಂದಾಗಿ ಮಂಗಳೂರು ಆರ್ ಟಿ ಒ ಕಚೇರಿಯಲ್ಲಿ ಕೆಲಸದ ಹೊರೆ ಕಡಿಮೆಯಾಗಲಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶೀಘ್ರ ಸ್ವಂತ ನಿವೇಶನದಲ್ಲಿ ಆರ್.ಟಿ.ಒ. ಕಚೇರಿ: ರಮಾನಾಥ ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*