ಉಮಾಶಿವ ಕ್ಷೇತ್ರದಲ್ಲಿ ಮಂಗಲಧಾಮಕ್ಕೆ ಶಂಕುಸ್ಥಾಪನೆ

ಶ್ರೀರಾಮಚಂದ್ರಾಪುರ ಮಠದ ಅಂಗಸಂಸ್ಥೆಯಾಗಿರುವ ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಲಾಗುವ ಮಂಗಲಧಾಮಕ್ಕೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಲಾಯಿತು.

ಜಾಹೀರಾತು

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಶಂಕುಸ್ಥಾಪನೆ ನೆರವೇರಿಸಿ, ಮಾತನಾಡಿ, ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಸಮಾಜದ ಉನ್ನತಿಗಾಗಿ, ಸಂಸ್ಕೃತಿಯ ಉಳಿವಿಗಾಗಿ ಶ್ರಮಿಸುತ್ತಿರುವ ರೀತಿ ಅಮೋಘವಾಗಿದೆ. ಶ್ರೀರಾಮ ಮತ್ತು ಶ್ರೀಕೃಷ್ಣ ದೇವರ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಉನ್ನತಿಗಾಗಿ ಅಪಾರ ಸೇವೆ ಸಲ್ಲಿಸುತ್ತಿದ್ದಾರೆ. ಇಂದಿನ ಸರಕಾರ ಮಠ, ಮಂದಿರಗಳನ್ನು ಸ್ವಾಽನಪಡಿಸಿಕೊಳ್ಳುವ ಹುನ್ನಾರವನ್ನು ಇಟ್ಟುಕೊಂಡಿದೆ. ಇದು ಹಿಂದೂ ಸಮಾಜದ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕ್ರಮವಾಗಿದೆ. ಇದು ಅಪಾಯಕಾರಿ ಬೆಳವಣಿಗೆ. ಈ ಬಗ್ಗೆ ಹಿಂದೂ ಸಮಾಜ ಜಾಗೃತವಾಗಬೇಕು ಎಂದು ಅವರು ಹೇಳಿದರು.

ಮಂಗಳೂರು ಹವ್ಯಕ ಮಂಡಲ ಅಧ್ಯಕ್ಷ ಸೇರಾಜೆ ಸುಬ್ರಹ್ಮಣ್ಯ ಭಟ್, ಡಾ.ಕಮಲಾ ಪ್ರಭಾಕರ ಭಟ್, ಬಿ.ಸಿ.ರೋಡ್‌ನ ವೈದ್ಯ ಡಾ.ಎಂ.ಎಸ್.ಭಟ್, ಕುಪ್ಳುಚಾರು ಮರಿ ಭಟ್, ಕುಪ್ಳುಚಾರು ಡಾ.ಮರಿ ಭಟ್, ಮುಳ್ಳುಂಜ ವೆಂಕಟೇಶ್ವರ ಭಟ್, ಅಡ್ಕತ್ತಿಮಾರು ರಾಮಚಂದ್ರ ಭಟ್, ಕಲ್ಲಡ್ಕ ಹವ್ಯಕ ವಲಯ ದಿಗ್ದರ್ಶಕ ಕುದ್ಕುಳಿ ಕೃಷ್ಣ ಭಟ್ ಕೋಮಲೆ, ಕಾರ್ಯದರ್ಶಿ ಗಣೇಶ ಭಟ್, ಕೋಶಾಧಿಕಾರಿ ಎಸ್.ಎನ್.ಶ್ರೀಕಾಂತ್, ಸದಸ್ಯರಾದ ಶ್ಯಾಮ ಭಟ್ ಪಂಜಿಗದ್ದೆ, ಯತಿನ್ ಕುಮಾರ್ ಕಲ್ಲಡ್ಕ, ಡಾ.ಮನೋಜ್ ಕಲ್ಲಡ್ಕ, ಸತೀಶ ಪಂಜಿಗದ್ದೆ, ಮುರಳೀಕೃಷ್ಣ ಕುಕ್ಕಿಲ, ಈಶ್ವರ ಭಟ್ ಮನುಶ್ರೀ, ಡಾ.ಚಂದ್ರಶೇಖರ್, ಗೋಪಾಲಕೃಷ್ಣ ಭಟ್ ಮುಳಿಯ, ಬಾಲಕೃಷ್ಣ ಭಟ್, ಛತ್ರ ರಾಮ ಭಟ್, ಕುಪ್ಳುಚಾರು ಲಕ್ಷ್ಮೀ ಅಮ್ಮ, ಸಂಜೀವ ಮಾಡದಡಿ, ಮೆನೇಜರ್ ಬಾಲಸುಬ್ರಹ್ಮಣ್ಯ ಆರ್.ಕೆ. ಮೊದಲಾದವರು ಉಪಸ್ಥಿತರಿದ್ದರು. ಶ್ರೀ ಉಮಾಶಿವ ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್ ಸ್ವಾಗತಿಸಿ, ವಂದಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಉಮಾಶಿವ ಕ್ಷೇತ್ರದಲ್ಲಿ ಮಂಗಲಧಾಮಕ್ಕೆ ಶಂಕುಸ್ಥಾಪನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*