ಬಂಟ್ವಾಳ

ಬೊಂಡಾಲ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಸನ್ಮಾನ

ಬಿ.ಸಿ.ರೋಡ್ ಆರಾಧನಾ ಫ್ರೆಂಡ್ಸ್ ಸರ್ಕಲ್ ಇದರ ೩೦ನೇ ವಾರ್ಷಿಕೋತ್ಸವ ಪ್ರಯುಕ್ತ ಹಿಂದೂ ಯುವ ಸೇನೆ ಆರಾಧನಾ ಶಾಖೆ ಇದರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಧ್ಯಮಿಕ ಶಿಕ್ಷಣ ಅಭಿಯಾನ ಮತ್ತು ಎಂಎಚ್‌ಆರ್ ಡಿ ಯವರು ನಡೆಸುವ ಕಲೋತ್ಸವದಲ್ಲಿ ೨೦೧೭-೧೮ನೆ ಸಾಲಿನ ರಾಷ್ಟ್ರಮಟ್ಟದ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಬೊಂಡಾಲ ದಿ. ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ನಿರ್ದೇಶಕ, ಶಿಕ್ಷಕರಿಗೆ ಪ್ರತಿಭಾ ಪುರಸ್ಕಾರ, ಸಮ್ಮಾನ ನಡೆಸಲಾಯಿತು.

ಜಾಹೀರಾತು

ನಾಟಕ ನಿರ್ದೇಶಕ, ದೈಹಿಕ ಶಿಕ್ಷಣ ಶಿಕ್ಷಕ ಚಿನ್ನಪ್ಪ ಕೆ. ಜಾಲ್ಸೂರು ಮತ್ತು ವಿದ್ಯಾರ್ಥಿಗಳಾದ ನವಿತಾ, ಜಯಗೋವಿಂದ ಸನ್ಮಾನ ಸ್ವೀಕರಿಸಿದರು.
ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಕಿರಣ್ ರಾಜ್ ಪೂಂಜರಕೋಡಿ, ಪದಾಧಿಕಾರಿಗಳಾದ ಸಂಜೀವ ಕೊಟ್ಟಾರಿ, ಪ್ರಕಾಶ್ ಪೂಂಜರಕೋಡಿ, ಪವನ್ ಕುಮಾರ್, ರಾಜೇಶ್ ಪೂಂಜರಕೋಡಿ, ರಾಮಚಂದ್ರ ಮಯ್ಯ, ನರೆಶ್ ಕುಮಾರ್ ಕಳ್ಳಿಮಾರ್ ಮತ್ತು ಹಿಂದೂ ಯುವಸೇನೆಯ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕ ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ