ವಾಮದಪದವು

ಗಿಡ ಬದುಕಿಸಿದ್ರಷ್ಟೇ ಹಕ್ಕಿಗಳಿಗೆ ಆಶ್ರಯ

www.bantwalnews.com

ಜಾಹೀರಾತು

ಬಂಟ್ವಾಳ ತಾಲೂಕಿನ ಕಡ್ತಾಲಬೆಟ್ಟು ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ  ಗುರುವಾರ  ’ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ’ಎಂಬ ಜಾಗೃತಿ ಕಾರ್ಯಗಾರ ನಡೆಯಿತು.

ಅಳಿವಿನಂಚಿನಲ್ಲಿರುವ  ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯ ರಾಶಿಗಳನ್ನು ಉಳಿಸಿ, ಬೆಳೆಸಬೇಕಾಗಿದೆ. ಇದರಿಂದ ಪಕ್ಷಿಗಳಿಗೆ ಆಹಾರ ಮತ್ತು ಆಶ್ರಯ ಒದಗುತ್ತದೆ ಎಂದು ನಿತ್ಯಾನಂದ ಶೆಟ್ಟಿ ಹೇಳಿದರು. 

ನೀರಿನ ಮೂಲಗಳಿಲ್ಲದ ಕಡೆಗಳಲ್ಲಿ ಬೇಸಿಗೆಗಾಲದಲ್ಲಿ ಪಕ್ಷಿಗಳಿಗೆ ಕುಡಿಯಲು ನೀರಿನ ವ್ಯವಸ್ಥೆ ಒದಗಿಸಿದಾಗ ಪಕ್ಷಿಗಳಿಗೆ ಉಪಯೋಗವಾಗುತ್ತದೆ. ಹೀಗಾಗಿ ಮನೆ, ಶಾಲೆ ಕಟ್ಟಡ ಆವರಣಗಳಲ್ಲಿ ನೀರಿನ ತಟ್ಟೆ ಅಳವಡಿಸಿ ಈ ಮೂಲಕ ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಬಹುದು ಎಂದರು.

ಈ ಸಂದರ್ಭ ರಮ್ಯ ಮಾತನಾಡಿ, ಪರಿಸರದಲ್ಲಿ ವೈವಿಧ್ಯಮಯ ಸಸ್ಯ ವರ್ಗಗಳಿವೆ. ಸಮೃದ್ಧವಾದ ಪರಿಸರವನ್ನು ಉಳಿಸಿ, ಬೆಳೆಸಬೇಕಾಗಿದೆ ಎಂದರು.

ಶಾಲೆಯ ಮುಖ್ಯ ಶಿಕ್ಷಕ ಎಂ. ರತ್ನಾಕರ ಭಟ್ , ಕೃಷಿಕ ಯಂ. ಕೇಶವಯ್ಯ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸದಾಶಿವ ಮಡಿವಾಳ ಅಧ್ಯಕ್ಷತೆ ವಹಿಸಿದ್ದರು.ವಿದ್ಯಾರ್ಥಿನಿ ನಿಧಿ ಶೆಟ್ಟಿ ಸ್ವಾಗತಿಸಿದರು. ಹರ್ಷಿತಾ ವಂದಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.