ವಾಮದಪದವು

ಗಿಡ ಬದುಕಿಸಿದ್ರಷ್ಟೇ ಹಕ್ಕಿಗಳಿಗೆ ಆಶ್ರಯ

www.bantwalnews.com

ಜಾಹೀರಾತು

ಬಂಟ್ವಾಳ ತಾಲೂಕಿನ ಕಡ್ತಾಲಬೆಟ್ಟು ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ  ಗುರುವಾರ  ’ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ’ಎಂಬ ಜಾಗೃತಿ ಕಾರ್ಯಗಾರ ನಡೆಯಿತು.

ಅಳಿವಿನಂಚಿನಲ್ಲಿರುವ  ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯ ರಾಶಿಗಳನ್ನು ಉಳಿಸಿ, ಬೆಳೆಸಬೇಕಾಗಿದೆ. ಇದರಿಂದ ಪಕ್ಷಿಗಳಿಗೆ ಆಹಾರ ಮತ್ತು ಆಶ್ರಯ ಒದಗುತ್ತದೆ ಎಂದು ನಿತ್ಯಾನಂದ ಶೆಟ್ಟಿ ಹೇಳಿದರು. 

ನೀರಿನ ಮೂಲಗಳಿಲ್ಲದ ಕಡೆಗಳಲ್ಲಿ ಬೇಸಿಗೆಗಾಲದಲ್ಲಿ ಪಕ್ಷಿಗಳಿಗೆ ಕುಡಿಯಲು ನೀರಿನ ವ್ಯವಸ್ಥೆ ಒದಗಿಸಿದಾಗ ಪಕ್ಷಿಗಳಿಗೆ ಉಪಯೋಗವಾಗುತ್ತದೆ. ಹೀಗಾಗಿ ಮನೆ, ಶಾಲೆ ಕಟ್ಟಡ ಆವರಣಗಳಲ್ಲಿ ನೀರಿನ ತಟ್ಟೆ ಅಳವಡಿಸಿ ಈ ಮೂಲಕ ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಬಹುದು ಎಂದರು.

ಜಾಹೀರಾತು

ಈ ಸಂದರ್ಭ ರಮ್ಯ ಮಾತನಾಡಿ, ಪರಿಸರದಲ್ಲಿ ವೈವಿಧ್ಯಮಯ ಸಸ್ಯ ವರ್ಗಗಳಿವೆ. ಸಮೃದ್ಧವಾದ ಪರಿಸರವನ್ನು ಉಳಿಸಿ, ಬೆಳೆಸಬೇಕಾಗಿದೆ ಎಂದರು.

ಶಾಲೆಯ ಮುಖ್ಯ ಶಿಕ್ಷಕ ಎಂ. ರತ್ನಾಕರ ಭಟ್ , ಕೃಷಿಕ ಯಂ. ಕೇಶವಯ್ಯ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸದಾಶಿವ ಮಡಿವಾಳ ಅಧ್ಯಕ್ಷತೆ ವಹಿಸಿದ್ದರು.ವಿದ್ಯಾರ್ಥಿನಿ ನಿಧಿ ಶೆಟ್ಟಿ ಸ್ವಾಗತಿಸಿದರು. ಹರ್ಷಿತಾ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ