ಬಂಟ್ವಾಳ

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

 ಬಂಟ್ವಾಳ ತಾಲೂಕಿನ ಇನೋಳಿ ಬ್ಯಾರೀಸ್ ಇನ್ಸ್ಟಿಟ್ಯೂಟ್ ಓಫ್ ಟೆಕ್ನಾಲಾಜಿ ಇದರ ಪ್ರಥಮ ವರ್ಷದ ವಿಭಾಗದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ  ಕುಲಸಚಿವರು ಡಾ ಎಂ ಖಾನ್ ಅವರು ಮಾತನಾಡಿ ತಂತ್ರಜ್ಞಾನದಲ್ಲಿ ವಿಜ್ಞಾನದ ಮಹತ್ವ ಸೈನ್ಸ್ ತಾಂತ್ರಿಕ ಕ್ಷೇತ್ರದಲ್ಲಿ ಆದ ಮಹತ್ವದ ಬೆಳವಣಿಗೆ ಹಾಗೂ ತಂತ್ರಜ್ಞಾನದ ಒಳಿತು ಕೆಡುಕುಗಳನ್ನು ವಿವರಿಸಿದರು.

ಜಾಹೀರಾತು

ಪ್ರಥಮ ವರ್ಷದ ವಿಭಾಗದ ಮುಖ್ಯಸ್ಥರಾದ ಡಾ ಅಂಜುಮ್ ಖಾನ್ ಅವರು ವಿಜ್ಞಾನಕ್ಕೆ ಸರ್.ವಿ ರಾಮನ್ ಕೊಡುಗೆಯನ್ನು ವಿವರಿಸಿದರು. ಸಂಸ್ಥೆಯ ಪ್ರಾಂಶುಪಾಲ ಡಾ ಆಂಟೋನಿ ಅವರು ಮಾತನಾಡಿ ತಾಂತ್ರಿಕ ಕಲಿಕೆಯಲ್ಲಿ ಸಂಶೋಧನೆಯ ಮಹತ್ವವನ್ನು ಹೇಳಿದರು.

 ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ, ಸೈನ್ಸ್ ಮಾಡೆಲ್ ತಯಾರಿ, ವಿಜ್ಞಾನ ರಸ ಪ್ರಶ್ನೆ, ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ರಸಾಯನ ವಿಭಾಗದ ಉಪನ್ಯಾಸಕಿ ಪ್ರೊ ಇಮ್ರಾನ್ ಅಹ್ಮದ್ ವಿಜೇತರ ಹೆಸರನ್ನು ಘೋಷಿಸಿದರು

ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಪ್ರೊ ವಿನುತಾ, ಪ್ರೊ ಝಮೀಲ್ ಅಹ್ಮದ್, ವಿದ್ಯಾರ್ಥಿ ಸಮ್ರ ನಾಜ್, ವಿದ್ಯಾರ್ಥಿ ಸುನೆಹ್ರ ಮರಿಯಮ್ ವಿವಿಧ ಜವಾಬ್ದಾರಿ ನಿಭಾಯಿಸಿದರು. ಕಾರ್ಯಕ್ರಮದಲ್ಲಿ ಅಗಲಿದ ಖ್ಯಾತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ಅವರಿಗೆ ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಜಂಜಲಿ ಸಲ್ಲಿಸಲಾಯಿತು.

ಜಾಹೀರಾತು

ಕಾರ್ಯಕ್ರಮದಲ್ಲಿ ಬಿ ಟಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಡಾ ಅಝೀಜ್ ಮುಸ್ತಫಾ ಮತ್ತು ವಿವಿಧ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ