ಬಂಟ್ವಾಳ

ಪಂಜೆ ಜನ್ಮಸ್ಥಳದಲ್ಲಿ ಸಾಹಿತ್ಯ ಕಾರ್ಯಕ್ರಮ

ಜಾಹೀರಾತು

ಪಂಜೆ ಮಂಗೇಶರಾಯರ ಜನ್ಮಸ್ಥಳ ಪ್ರದೇಶವಾದ ಬಂಟ್ವಾಳ ಪುರಸಭೆಯ ಕಚೇರಿ ಎದುರು ಇರುವ ಸರಕಾರಿ ಆಸ್ಪತ್ರೆ ಪಕ್ಕದ ಮರದ ನೆರಳಿನಲ್ಲಿ ಸಾಹಿತ್ಯಾಸಕ್ತರು ಒಟ್ಟು ಸೇರಿ ಪುಸ್ತಕ ಅನಾವರಣ ಕಾರ್ಯಕ್ರಮವನ್ನು ನಡೆಸಿದರು.

ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೂರ್ಯ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಸಹನಾ ಸಾಹಿತಿ ಭಾಸ್ಕರ ಅಡ್ವಳ ಬರೆದ ನಮ್ಮೆಲ್ಲರ ಪ್ರಕಾಶಕ್ಕಾಗಿ ಎಂಬ ಸ್ವಂತಿಕೆ ವಿಕಸನದ ಚಿಂತನೆಗಳ ಪುಸ್ತಕವನ್ನು ಬಿಡುಗಡೆಗೊಳಿಸಿದಳು.

ಪಂಜೆ ಮಂಗೇಶರಾಯರ ಬದುಕಿನ ಕುರಿತು ತನಗಿದ್ದ ಮಾಹಿತಿಯನ್ನು ಸಭೆಗೆ ತಿಳಿಸಿದ ಸಹನಾ, ಅವರ ರಚನೆಗಳನ್ನು ಹಾಗೂ ತಾನು ರಚಿಸಿದ ಚುಟುಕುಗಳನ್ನು ಹಾಡುವ ಮೂಲಕ ಸೇರಿದ ಸಾಹಿತ್ಯಾಸಕ್ತರ ಗಮನ ಸೆಳೆದಳು.

ಜಾಹೀರಾತು

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಹಿತಿ ವಿ.ಬಿ.ಕುಳಮರ್ವ ಮಾತನಾಡಿ, ಕೃತಿ ಮತ್ತು ಅಡ್ವಳ ಅವರ ಕುರಿತು ಬೆಳಕು ಚೆಲ್ಲಿದರು. ಪ:ಂಜೆಯವರ ಸಾಹಿತ್ಯದ ಕುರಿತು ವಿಶ್ಲೇಷಣೆ ನಡೆಸಿದರು. ಅಧ್ಯಕ್ಷತೆ ವಹಿಸಿದ್ದ ಏರ್ಯ ಲಕ್ಷ್ಮೀನಾರಾಯಣ ಆಳ್ವ ಮಾತನಾಡಿ, ಪಂಜೆಯವರ ಜನ್ಮಸ್ಥಳದಲ್ಲಿ ನಡೆದ ಈ ಕಾರ್ಯಕ್ರಮ ಅಪೂರ್ವ ಹಾಗು ಅರ್ಥಪೂರ್ಣ, ಮಕ್ಕಳನ್ನು ತೊಡಗಿಸಿಕೊಳ್ಳುವುದು ಇಂದಿನ ಅಗತ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಿ.ಆರ್.ಸಿ.ಸಂಪನ್ಮೂಲ ವ್ಯಕ್ತಿ ನಾರಾಯಣ ಗೌಡ ನುಡಿಗೀತೆ ಹಾಡಿದರು. ಮಕ್ಕಳ ಲೋಕದ ಕಾರ್ಯದರ್ಶಿ ರಾಜಾರಾಮ ವರ್ಮ ಸ್ವಾಗತಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಮೋಹನ ರಾವ್ ವಂದಿಸಿದರು. ಭಾಸ್ಕರ ಅಡ್ವಳ ಪ್ರಾಸ್ತಾವಿಕ ಮಾತನಾಡಿದರು. ವಿಶ್ರಾಂತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ