ಬಂಟ್ವಾಳ

ಲಯನ್ಸ್ ಜಿಲ್ಲಾ ಸಮ್ಮೇಳನಾಧ್ಯಕ್ಷರಾಗಿ ದಾಮೋದರ ಬಿ. ಎಂ. ಆಯ್ಕೆ

ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಜಿಲ್ಲೆ 317ಡಿ 17-18ನೇ ಸಾಲಿನ ಲಯನ್ಸ್ ಜಿಲ್ಲಾ ಸಮ್ಮೇಳನವು 2018 ಎಪ್ರಿಲ್ 7 ಮತ್ತು 8ರಂದು ಬಂಟವಾಳದ ಬಂಟರ ಭವನದಲ್ಲಿ ಜರಗಲಿರುವುದು. ಮಂಗಳೂರು, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆಯ 15ನೇ ಜಿಲ್ಲಾ ಸಮ್ಮೇಳನಾಧ್ಯಕ್ಷರಾಗಿ ದಾಮೋದರ ಬಿ. ಎಂ. ಆಯ್ಕೆಗೊಂಡಿರುತ್ತಾರೆ.

ಲಯನ್ಸ್ ಜಿಲ್ಲಾ ಗವರ್ನರ್ ಎಚ್. ಆರ್. ಹರೀಶ್, ಜಿಲ್ಲಾ ಸಂಪುಟ ಕಾರ್ಯದರ್ಶಿ ವಸಂತ ಕುಮಾರ್ ಶೆಟ್ಟಿ, ಗವರ್ನರ್ ಕೋಆರ್ಡಿನೇಟರ್ ಶಶಿಕಿರಣ್ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಜಗದೀಶ ಯಡಪಡಿತ್ತಾಯ, ವಲಯಾಧ್ಯಕ್ಷ ಶಿವಾನಂದ ಬಾಳಿಗಾ ಮತ್ತಿತರರ ಉಪಸ್ಥಿತಿಯಲ್ಲಿ ನಡೆದ ಪ್ರಕ್ರಿಯೆಯಲ್ಲಿ ಗೌರವಾಧ್ಯಕ್ಷರಾಗಿ ಡಾ. ಬಿ. ವಸಂತ ಬಾಳಿಗಾ, ಮುಖ್ಯ ಸಲಹೆಗಾರರಾಗಿ ಕರ್ನಾಟಕ ಬ್ಯಾಂಕ್ ಮಾಜಿ ಚೆಯರ್ಮೆನ್ ಗೌರವಾನ್ವಿತ ಲಯನ್ ಸದಸ್ಯರಾದ ಅನಂತಕೃಷ್ಣ, ಡಾ| ಶ್ಯಾಮ್ ಭಟ್, ಎನ್. ಸತೀಶ್ ಕುಡ್ವ, ಕಾರ್ಯದರ್ಶಿಯಾಗಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಕೋಶಾಧಿಕಾರಿಯಾಗಿ ಜಯಂತ ಶೆಟ್ಟಿ ಆಯ್ಕೆಗೊಂಡಿರುತ್ತಾರೆ. ಹಾಗೂ ವಿವಿಧ ಉಪಸಮಿತಿಗಳನ್ನು ರಚಿಸಿ, ಲಯನ್ಸ್ ಜಿಲ್ಲೆಯ ಸಕ್ರೀಯ ಸದಸ್ಯರನ್ನು ಸಮಿತಿಗಳಿಗೆ ಆಯ್ಕೆಗೊಳಿಸಲಾಯಿತು.

ಜಾಹೀರಾತು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.