ಬಂಟ್ವಾಳ

ಲಯನ್ಸ್ ಜಿಲ್ಲಾ ಸಮ್ಮೇಳನಾಧ್ಯಕ್ಷರಾಗಿ ದಾಮೋದರ ಬಿ. ಎಂ. ಆಯ್ಕೆ

ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಜಿಲ್ಲೆ 317ಡಿ 17-18ನೇ ಸಾಲಿನ ಲಯನ್ಸ್ ಜಿಲ್ಲಾ ಸಮ್ಮೇಳನವು 2018 ಎಪ್ರಿಲ್ 7 ಮತ್ತು 8ರಂದು ಬಂಟವಾಳದ ಬಂಟರ ಭವನದಲ್ಲಿ ಜರಗಲಿರುವುದು. ಮಂಗಳೂರು, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆಯ 15ನೇ ಜಿಲ್ಲಾ ಸಮ್ಮೇಳನಾಧ್ಯಕ್ಷರಾಗಿ ದಾಮೋದರ ಬಿ. ಎಂ. ಆಯ್ಕೆಗೊಂಡಿರುತ್ತಾರೆ.

ಲಯನ್ಸ್ ಜಿಲ್ಲಾ ಗವರ್ನರ್ ಎಚ್. ಆರ್. ಹರೀಶ್, ಜಿಲ್ಲಾ ಸಂಪುಟ ಕಾರ್ಯದರ್ಶಿ ವಸಂತ ಕುಮಾರ್ ಶೆಟ್ಟಿ, ಗವರ್ನರ್ ಕೋಆರ್ಡಿನೇಟರ್ ಶಶಿಕಿರಣ್ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಜಗದೀಶ ಯಡಪಡಿತ್ತಾಯ, ವಲಯಾಧ್ಯಕ್ಷ ಶಿವಾನಂದ ಬಾಳಿಗಾ ಮತ್ತಿತರರ ಉಪಸ್ಥಿತಿಯಲ್ಲಿ ನಡೆದ ಪ್ರಕ್ರಿಯೆಯಲ್ಲಿ ಗೌರವಾಧ್ಯಕ್ಷರಾಗಿ ಡಾ. ಬಿ. ವಸಂತ ಬಾಳಿಗಾ, ಮುಖ್ಯ ಸಲಹೆಗಾರರಾಗಿ ಕರ್ನಾಟಕ ಬ್ಯಾಂಕ್ ಮಾಜಿ ಚೆಯರ್ಮೆನ್ ಗೌರವಾನ್ವಿತ ಲಯನ್ ಸದಸ್ಯರಾದ ಅನಂತಕೃಷ್ಣ, ಡಾ| ಶ್ಯಾಮ್ ಭಟ್, ಎನ್. ಸತೀಶ್ ಕುಡ್ವ, ಕಾರ್ಯದರ್ಶಿಯಾಗಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಕೋಶಾಧಿಕಾರಿಯಾಗಿ ಜಯಂತ ಶೆಟ್ಟಿ ಆಯ್ಕೆಗೊಂಡಿರುತ್ತಾರೆ. ಹಾಗೂ ವಿವಿಧ ಉಪಸಮಿತಿಗಳನ್ನು ರಚಿಸಿ, ಲಯನ್ಸ್ ಜಿಲ್ಲೆಯ ಸಕ್ರೀಯ ಸದಸ್ಯರನ್ನು ಸಮಿತಿಗಳಿಗೆ ಆಯ್ಕೆಗೊಳಿಸಲಾಯಿತು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts