ಬಂಟ್ವಾಳ ತಾಲೂಕಿನ ಮಿನಿ ವಿಧಾನ ಸೌಧ (ತಾಲೂಕು ಕಚೇರಿ)ದಲ್ಲಿ ವಿವಿಧ ಅವಶ್ಯಕತೆಗಳಿಗಾಗಿ ಬರುವ ಸಾರ್ವಜನಿಕರ ಅಗತ್ಯ ಕೆಲಸಗಳ ವಿಳಂಬ ಹಾಗೂ ತಾಲೂಕು ಕಚೇರಿಯ ಅವ್ಯವಸ್ಥೆಯ ವಿರುದ್ಧ ಮಾ. 23ರಂದು ಸಂಜೆ 4.30 ಕ್ಕೆ ಎಸ್ಡಿಪಿಐ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದೆ.
ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಬೇಕಾದ ಆಧಾರ್ಕಾರ್ಡ್, ಆರ್ಟಿಇ ಅರ್ಜಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ವಿತರಣೆಯಲ್ಲಿ ಅವ್ಯವಸ್ಥೆ ಉಂಟಾಗಿದೆ. ಅಲ್ಲದೆ ಕಚೇರಿ ಆವರಣದಲ್ಲಿ ಮದ್ಯವರ್ತಿಗಳು ಹೆಚ್ಚಾಗಿದೆ. ಕಚೇರಿಯಲ್ಲಿ ಸಿಬ್ಬಂದಿ ಕೊರತೆಯಿದ್ದು, ಸಾರ್ವಜನಿಕರಿಗೆ ಅಗತ್ಯ ಕೆಲಸಗಳು ಅನಗತ್ಯ ವಿಳಂಬವಾಗುತ್ತಿದೆ. ಸಾರ್ವಜನಿಕರು ಮಿನಿ ವಿಧಾನಸೌದದಲ್ಲಿ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರೂ, ಸಾರ್ವಜನಿಕರ ಯಾವುದೇ ಕೆಲಸಗಳು ಆಗುತ್ತಿಲ್ಲ. ಈ ಬಗ್ಗೆ ಉಸ್ತುವಾರಿ ಸಚಿವರು ಗಮನ ಹರಿಸಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಸ್ಡಿಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷ ಶಾಹುಲ್ ಎಸ್.ಎಚ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳ ತಾಲೂಕು ಕಚೇರಿ ಅವ್ಯವಸ್ಥೆ: ಎಸ್ಡಿಪಿಐ ಪ್ರತಿಭಟನೆ"
Be the first to comment on "ಬಂಟ್ವಾಳ ತಾಲೂಕು ಕಚೇರಿ ಅವ್ಯವಸ್ಥೆ: ಎಸ್ಡಿಪಿಐ ಪ್ರತಿಭಟನೆ"