ಬಂಟ್ವಾಳ

ಬಂಟ್ವಾಳ ತಾಲೂಕು ಕಚೇರಿ ಅವ್ಯವಸ್ಥೆ: ಎಸ್‌ಡಿಪಿಐ ಪ್ರತಿಭಟನೆ

ಬಂಟ್ವಾಳ ತಾಲೂಕಿನ ಮಿನಿ ವಿಧಾನ ಸೌಧ (ತಾಲೂಕು ಕಚೇರಿ)ದಲ್ಲಿ ವಿವಿಧ ಅವಶ್ಯಕತೆಗಳಿಗಾಗಿ ಬರುವ ಸಾರ್ವಜನಿಕರ ಅಗತ್ಯ ಕೆಲಸಗಳ ವಿಳಂಬ ಹಾಗೂ ತಾಲೂಕು ಕಚೇರಿಯ ಅವ್ಯವಸ್ಥೆಯ ವಿರುದ್ಧ ಮಾ. 23ರಂದು ಸಂಜೆ 4.30 ಕ್ಕೆ ಎಸ್‌ಡಿಪಿಐ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದೆ.

ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಬೇಕಾದ ಆಧಾರ್‌ಕಾರ್ಡ್, ಆರ್‌ಟಿಇ ಅರ್ಜಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ವಿತರಣೆಯಲ್ಲಿ ಅವ್ಯವಸ್ಥೆ ಉಂಟಾಗಿದೆ. ಅಲ್ಲದೆ ಕಚೇರಿ ಆವರಣದಲ್ಲಿ ಮದ್ಯವರ್ತಿಗಳು ಹೆಚ್ಚಾಗಿದೆ. ಕಚೇರಿಯಲ್ಲಿ ಸಿಬ್ಬಂದಿ ಕೊರತೆಯಿದ್ದು, ಸಾರ್ವಜನಿಕರಿಗೆ ಅಗತ್ಯ ಕೆಲಸಗಳು ಅನಗತ್ಯ ವಿಳಂಬವಾಗುತ್ತಿದೆ. ಸಾರ್ವಜನಿಕರು ಮಿನಿ ವಿಧಾನಸೌದದಲ್ಲಿ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರೂ, ಸಾರ್ವಜನಿಕರ ಯಾವುದೇ ಕೆಲಸಗಳು ಆಗುತ್ತಿಲ್ಲ. ಈ ಬಗ್ಗೆ ಉಸ್ತುವಾರಿ ಸಚಿವರು ಗಮನ ಹರಿಸಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಡಿಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷ ಶಾಹುಲ್ ಎಸ್.ಎಚ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ