ಬಂಟ್ವಾಳ

ರಾಮ ನಾಮ ಸ್ಮರಣೆ, ಮಂದಿರಗಳಲ್ಲಿ ವಿಶೇಷ ಪೂಜೆ, ಭಜನೆ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

 

ಜಾಹೀರಾತು

ರಾಮ ನವಮಿ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಪ್ರಮುಖ ರಾಮಮಂದಿರಗಳಲ್ಲಿ ಭಜನಾ ಕಾರ್ಯಕ್ರಮಗಳು ಭಾನುವಾರ ನಡೆದವು. ಕೆಲವೆಡೆ ಭಕ್ತರು ದೇವರಿಗೆ ವಿಶೇಷ ಪೂಜೆಯನ್ನೂ ಸಲ್ಲಿಸಿದರು.

ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಭಾನುವಾರ ಬೆಳಗ್ಗೆ ಸೂರ್ಯೋದಯದಿಂದ ಸೋಮವಾರ ಸೂರ್ಯೋದಯದವರೆಗೆ ಅಹರ್ನಿಶಿ ಭಜನೆ ನಡೆಯುತ್ತಿದೆ. ಡಾ. ಪ್ರಭಾಕರ ಭಟ್ ನೇತೃತ್ವದ ಶ್ರೀ ರಾಮಾಂಜನೇಯ ಸೇವಾ ಟ್ರಸ್ಟ್ ನಡಿ ಕಾರ್ಯಾಚರಿಸುವ ರಾಮ ಮಂದಿರದಲ್ಲಿ ಹನುಮಜ್ಜಯಂತಿ ಉತ್ಸವ 31ರಂದು ಶನಿವಾರ ನಡೆಯಲಿದ್ದು, ಈ ಸಂದರ್ಭ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಎಲ್ಲ ಭಕ್ತರಿಂದ ಸಪರಿವಾರ ಶ್ರೀರಾಮಚಂದ್ರ ದೇವರಿಗೆ ಮತ್ತು ಹನುಮಂತ ದೇವರಿಗೆ ಅಭಿಷೇಕ ನಡೆಯುತ್ತದೆ.

ಬಿ.ಸಿ.ರೋಡಿನ ಶ್ರೀರಾಮ ಮಂದಿರದಲ್ಲೂ ಬೆಳಗ್ಗಿನಿಂದಲೇ ಭಜನಾ ಕಾರ್ಯಕ್ರಮಗಳು ಆರಂಭಗೊಂಡವು. ರಾಮನವಮಿ ಪ್ರಯುಕ್ತ ವಿಶೇಷ ಪೂಜೆಯನ್ನೂ ಹಮ್ಮಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ