ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಭಾರತೀಯ ಜೈನ್ ಮಿಲನ್ ಬಂಟ್ವಾಳ ಆಶ್ರಯದಲ್ಲಿ ಮಹಾವೀರ ಜಯಂತಿ ಉತ್ಸವದ ತಾಲೂಕು ಮಟ್ಟದ ಕಾರ್ಯಕ್ರಮ ಬಿ.ಸಿ.ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಗುರುವಾರ ಬೆಳಗ್ಗೆ ನಡೆಯಿತು.
ಜಾಹೀರಾತು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಂಟ್ವಾಳ ತಾಲೂಕು ಪ್ರಭಾರ ತಹಶೀಲ್ದಾರ್ ಜೀನ್ ಮೇರಿ ತೌರೋ, ಭಗವಾನ್ ಮಹಾವೀರ ತತ್ವಾದರ್ಶ ಪಾಲನೆಗೆ ಕರೆ ನೀಡಿದರು. ಬಂಟ್ವಾಳ ಜೈನ್ಮಿಲನ್ ಅಧ್ಯಕ್ಷ ಬ್ರಿಜೇಶ್ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಭಾರತೀಯ ಜೈನ್ ಮಿಲನ್ ವಲಯ ೮ರ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್, ವಲಯ ನಿರ್ದೇಶಕ ಸುದರ್ಶನ್ ಜೈನ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್, ಜೈನ್ ಮಿಲನ್ ಬಂಟ್ವಾಳ ಕಾರ್ಯದರ್ಶಿ ಗೀತಾ ಜಿನಚಂದ್ರ, ವಿಜಯಕುಮಾರಿ ಇಂದ್ರ, ಅಮರನಾಥ ಅಜಿಲ ಮೊದಲಾದವರು ಉಪಸ್ಥಿತರಿದ್ದರು. ಆದಿರಾಜ ಜೈನ್ ಅಲ್ಲಿಪಾದೆ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಚಂದ್ರಕಾಂತ ಜೈನ್ ವಂದಿಸಿದರು.
ಇದೇ ಸಂದರ್ಭ ಬಂಟ್ವಾಳ ತಾಲೂಕಿನ 13 ಜೈನಬಸದಿಗಳ ದರ್ಶನದ ವಾಹನ ಜಾಥಾವನ್ನು ಅರಿಗಲ್ಲು ಶ್ರೀಜಿನಚೈತ್ಯಾಲಯದ ಅಮರನಾಥ ಅಜಿಲ ಉದ್ಘಾಟಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳದಲ್ಲಿ ತಾಲೂಕು ಮಟ್ಟದ ಮಹಾವೀರ ಜಯಂತಿ"
Be the first to comment on "ಬಂಟ್ವಾಳದಲ್ಲಿ ತಾಲೂಕು ಮಟ್ಟದ ಮಹಾವೀರ ಜಯಂತಿ"