ಮತದಾನ: ವಿಕಲಚೇತನರ ಕುರಿತು ವಿಶೇಷ ಕಾಳಜಿ

1995ರ ವಿಕಲಚೇತನ ಕಾಯ್ದೆ ಕಲಂ 40ರ ಪ್ರಕಾರ ಪ್ರತಿಯೊಬ್ಬ ವಿಕಲಚೇತನರಿಗೂ ಕಾನೂನಿನಲ್ಲಿ ಸಮಾನ ಅವಕಾಶ ಕಲ್ಪಿಸಲಾಗಿದ್ದು, ಮತದಾರರ ಪಟ್ಟಿಯಲ್ಲಿ ವಿಕಲಚೇತನರ ಹೆಸರು ಸೇರ್ಪಡೆಗೆ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಚುನಾವಣಾ ಆಯೋಗ ಆದೇಶದಂತೆ ವಿಶೇಷ ಕಾಳಜಿ ವಹಿಸಿದೆ ಎಂದು ಜಿಲ್ಲಾ ವಿಕಲಚೇತನರು, ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಶಿವಪ್ಪ ರಾಥೋಡ್ ಮಾಹಿತಿ ನೀಡಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ ಮಂಗಳೂರು, ತಾಲೂಕು ಪಂಚಾಯತ್ ಬಂಟ್ವಾಳ ಪರವಾಗಿ ಬುಧವಾರ ತಾಲೂಕಿನ ವಿಕಲಚೇತನರು ಮತ್ತು ಅವರ ಪೋಷಕರಿಗಾಗಿ ಮತದಾನ ಜಾಗೃತಿ ಕುರಿತು ನಡೆಸಲಾದ ಸಭೆಯಲ್ಲಿ ಅವರು ಮಾಹಿತಿ ನೀಡಿದರು.

ವಿಕಲಚೇತನರು ಮತದಾನ ಕೇಂದ್ರಕ್ಕೆ ಮನೆಯಿಂದ ಹೋಗಿಬರಲು ಸ್ವಯಂಸೇವಕರನ್ನು ಹಾಗೂ ಕುರುಡರಿಗೆ ಮತದಾನ ಯಂತ್ರದ ವ್ಯವಸ್ಥೆ ಮಾಡಲಾಗುತ್ತದೆ. ಯಾವುದೇ ಒತ್ತಡ, ಆಮಿಷಕ್ಕೆ ಒಳಗಾಗದೆ ತನ್ನ ಒಂದು ಮತದಿಂದ ಏನಾಗುತ್ತದೆ ಎಂಬ ತಾತ್ಸಾರ ತಾಳದೆ ಪ್ರತಿಯೊಬ್ಬರೂ ಮತ ಚಲಾಯಿಸಬೇಕು. ವಿಆರ್ ಡಬ್ಲು ಅವರು ಪ್ರತಿದಿನ ಕಡ್ಡಾಯವಾಗಿ ಗ್ರಾಪಂ ಕಚೇರಿಯಲ್ಲಿ ಹಾಜರಿರಬೇಕು. ವಿಕಲಚೇತನರು ಮತದಾನ ಮಾಡಲು ಸರದಿಯಲ್ಲಿ ನಿಲ್ಲುವ ಅವಶ್ಯಕತೆ ಇಲ್ಲ. ಮತದಾನ ಕೇಂದ್ರಗಳು ವಿಕಲಚೇತನ ಸ್ನೇಹಿ ಕೇಂದ್ರಗಳಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ಮಾಹಿತಿ ನೀಡಿದರು.

ಮತದಾರರಪಟ್ಟಿಯಲ್ಲಿ ವಿಕಲಚೇತನರ ಹೆಸರು ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ,ಸ್ವೀಪ್ ಸಮಿತಿ ವಿಶೇಷ ಕಾಳಜಿ ವಹಿಸಿದೆ ಎಂದ ಅವರು,ವಿಕಲಚೇತನರು ಮತದಾನ ಕೇಂದ್ರಕ್ಕೆ ಹೋಗಿ ಬರಲು ಸ್ವಯಂ ಸೇವಕರನ್ನು ನಿಯೋಜಿಸಲಾಗುತ್ತಿದೆ ಎಂದರು.

ಜಾಹೀರಾತು

ಜಿಪಂ ಉಪಕಾರ್ಯದರ್ಶಿ, ಬಂಟ್ವಾಳ ಕ್ಷೇತ್ರ ಚುನಾವಣಾಧಿಕಾರಿ ರವಿ ಬಸರಿಹಳ್ಳಿ ಮಾತನಾಡಿ ಮತದಾನ ನಮ್ಮೆಲ್ಲರ ಪ್ರಮುಖ ಕರ್ತವ್ಯವಾಗಿದ್ದು, ನಿರ್ಭಿತಿಯಿಂದ ಯಾವುದೇ ಅಮಿಷಕ್ಕೊಳಗಾಗದೆ ಪ್ರತಿಯೊಬ್ಬರು ತಮ್ಮ ಮತದಾನದ ಹಕ್ಕು ಚಲಾಯಿಸಬೇಕು ಎಂದರು.

ಬಂಟ್ವಾಳ ತಾಪಂ ಕಾರ್ಯನಿರ್ವಣಾಧಿಕಾರಿ ರಾಜಣ್ಣ ಅವರು ಮಾತನಾಡಿ 18 ವರ್ಷ ತುಂಬಿದ ಪ್ರತಿಯೊಬ್ಬರು 2018 ರ ವಿಧಾನಸಭಾ ಚುನಾವಣೆಯಲ್ಲಿ ಮತಚಲಾಯಿಸಬೇಕು, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ದಾಖಲಾಗಿರುವ ಬಗ್ಗೆಯು ಖಚಿತಪಡಿಸಬೇಕು, ಹೆಸರು ಸೇರ್ಪಡೆಗೆ  ಏ.12 ರ ತನಕ ಅವಕಾಶವಿದೆ ಎಂದು ಮಾಹಿತಿ ನೀಡಿದರು. ಇದೇ ವೇಳೆ 2018 ಚುನಾವಣೆಯಲ್ಲಿ ಮತದಾನಮಾಡುವುದಾಗಿ ಪ್ರಮಾಣ ವಚನ ಬೋಧಿಸಲಾಯಿತು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮತದಾನ: ವಿಕಲಚೇತನರ ಕುರಿತು ವಿಶೇಷ ಕಾಳಜಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*