ಕಲ್ಲಡ್ಕ

ಯಂಗ್ ಚಾಲೆಂಜರ್ಸ್: ಮೂವರು ಸಾಧಕರಿಗೆ ಸನ್ಮಾನ

ಜಾಹೀರಾತು

ನೇರಳಕಟ್ಟೆಗಣೇಶನಗರ ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ನೇರಳಕಟ್ಟೆ ಕಲ್ಕುಡ ಕಲ್ಲುರ್ಟಿ ಜಾತ್ರೋತ್ಸವ ಪ್ರಯುಕ್ತ ಸಂಗೀತ ರಸಮಂಜರಿ, ನೃತ್ಯ ಸಂಭ್ರಮ ಹಾಗೂ ಸನ್ಮಾನ ಕಾರ್ಯಕ್ರಮ ದೇವಸ್ಥಾನದ ವಠಾರದ ದಿ. ರಾಕೇಶ್ ನಾಯ್ಕ್ ವೇದಿಕೆಯಲ್ಲಿ ಇತ್ತೀಚೆಗೆ ನಡೆಯಿತು.

ಉದ್ಯಮಿ ಜಗದೀಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಚಲನಚಿತ್ರ ನಟಚೇತನ್ ರೈ ಮಾಣಿ, ಬಂಟ್ವಾಳ ಲಯನ್ಸ್ ಕ್ಲಬ್ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ, ಡಾ. ಮನೋಹರ ರೈ, ಸುರತ್ಕಲ್ ಎನ್ಐಟಿಕೆ ದಿನೇಶ್ ನಾಯ್ಕ್, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜಾರಾಮ್ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶುಭಹಾರೈಸಿದರು.

ಜಾಹೀರಾತು

ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ರಾಮಚಂದ್ರ ಮೂಲ್ಯ, ನಿವೃತ್ತ ಸೈನಿಕ ತಿಮ್ಮಯ್ಯ ಗೌಡ, ಪ್ರಗತಿಪರ ಕೃಷಿಕ ಮೋಹನ್ದಾಸ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.

ಸಂಘದ ಪದಾಧಿಕಾರಿಗಳಾದ ಜಯಂತ ಆಚಾರ್ಯ, ಮೋಹನ್ ಆಚಾರ್ಯ, ಲೋಕೇಶ್ ಆಚಾರ್ಯ, ಶೀತಲ್ ಕೆ.ವಿ., ಪ್ರಶಾಂತ್ ಬಿ., ಉಪೇಂದ್ರ ಆಚಾರ್ಯ, ಸತೀಶ್ ಆಚಾರ್ಯ, ಕಿರಣ್ ಕುಮಾರ್, ಹರೀಶ್, ಸುನೀನ್, ಶರತ್ ಆಚಾರ್ಯ, ಗೌರೀಶ್, ಭವಿತ್ ಕೆ.ವಿ., ಚಂದ್ರಶೇಖರ್, ಮೋಹನ್ ನಾಯ್ಕ್, ಸುಮಂತ್ ಆಚಾರ್ಯ, ಶಶಿಕಿರಣ್, ಧನುಶ್, ಸಂಕೇತ್, ಸತೀಶ್, ಹರ್ಷಿತ್, ಲಕ್ಷೀಶ್, ಲೋಕೇಶ್ ಆಚಾರ್ಯ, ಶಿವಪ್ರಸಾದ್, ಮತ್ತಿತರರು ಉಪಸ್ಥಿತರಿದ್ದರು.

ರಾಮ್ಪ್ರಕಾಶ್ ವರ್ಮಾಸ್ ಮ್ಯೂಸಿಕಲ್ ತಂಡದಿಂದ ರಸಮಂಜರಿ ಹಾಗೂ ನೇರಳಕಟ್ಟೆ ಶಾರದಾ ಕಲಾ ತಂಡದಿಂದ ನೃತ್ಯ ಸಂಘ್ರಮ ನಡೆಯಿತು.

ಜಾಹೀರಾತು

ಯಂಗ್ ಚಾಲೆಂಜರ್ಸ್ ಸಂಘದ ಅಧ್ಯಕ್ಷ ಬಿಶು ಕುಮಾರ್ ಎನ್. ಸ್ವಾಗತಿಸಿ, ಪ್ರಶಾಂತ್ ವಂದಿಸಿ, ಶಿಕ್ಷಕ ಗೋಪಾಲಕೃಷ್ಣ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ