ಪ್ರಮುಖ ಸುದ್ದಿಗಳು

ಕಾವೇರಿ ವಿವಾದ: ಏಪ್ರಿಲ್ 12ರಂದು ಕರ್ನಾಟಕ ಬಂದ್ ಗೆ ಕರೆ

ಕಾವೇದಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಮತ್ತೊಂದು ಕರ್ನಾಟಕ ಬಂದ್ ನಡೆಯಲಿದೆ. ಇದಕ್ಕೆ ಕರೆ ಕೊಟ್ಟವರು ಕನ್ನಡ ಚಳವಳಿಯ ವಾಟಾಳ್ ನಾಗರಾಜ್.

ಜಾಹೀರಾತು

ಗುರುವಾರ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಏಪ್ರಿಲ್ 12ರಂದು ಬಂದ್ ಗೆ ಕರೆ ಕೊಟ್ಟಿದ್ದಾರೆ. ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ಬಂದ್ ಗೆ ಕರೆ ನೀಡುವುದಾಗಿ ಅವರು ತಿಳಿಸಿದ್ದಾರೆ.

ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ತಮಿಳುನಾಡಿನಲ್ಲಿ ಭಾರಿ ಹೋರಾಟ ನಡೆಯುತ್ತಿರುವ ವೇಳೆಯಲ್ಲೇ  ಮಂಡಳಿ ರಚನೆ ಮಾಡಬಾರದು ಎಂದು ವಾಟಾಳ್ ಹೇಳಿರುವುದು ಇಲ್ಲಿ ಗಮನಾರ್ಹ. ನಾವು ಹೋರಾಟಕ್ಕಿಳಿಯುವ ಯೋಚನೆಯಲ್ಲಿರಲಿಲ್ಲ. ತಮಿಳರೇ ನಮ್ಮನ್ನು ಹೋರಾಟಕ್ಕಿಳಿಯುವಂತೆ ಮಾಡಿದ್ದಾರೆ’ ಎಂದು ಕಿಡಿ ಕಾರಿರುವ ವಾಟಾಳ್, ದಕ್ಷಿಣ ಭಾರತದ ಸೂಪರ್ ಸ್ಟಾರುಗಳಾದ ರಜನೀಕಾಂತ್ ಮತ್ತು ಕಮಲಹಾಸನ್ ಅವರ ಚಿತ್ರಗಳು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ಮತ್ತೊಂದು ಎಚ್ಚರಿಕೆಯನ್ನೂ ವಾಟಾಳ್ ನೀಡಿದ್ದಾರೆ.

ಈ ನಡುವೆ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದು, ಚುನಾವಣೆ ಸಂದರ್ಭ ಬಂದ್, ಭಾವನಾತ್ಮಕವಾಗಿಯಷ್ಟೇ ಅಲ್ಲ, ರಾಜಕೀಯವಾಗಿಯೂ ಜನರನ್ನು ಹೇಗೆ ಸೆಳೆಯುತ್ತದೆ ಎಂಬುದನ್ನು ಕಾದು ನೋಡಬೇಕು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ