94 ಸಿ ಅಡಿ ಜಾಗ ಮಂಜೂರಾತಿಗೆ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ.

ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮಹಿಳೆಯೊಬ್ಬರ ದೂರಿನ ಮೇರೆಗೆ, ಪುತ್ತಿಲ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಕುಮಾರ್ ಮಹಿಳೆಯಿಂದ  5000 ರೂ, ಲಂಚದ ಹಣವನ್ನು ಸ್ವೀಕರಿಸುವಾಗ ಎಪ್ರಿಲ್ 5 ರಂದು ಎಸಿಬಿ ಪೊಲೀಸರಿಗೆ  ರೆಡ್ ಹಾಂಡ್ ಆಗಿ ಟ್ರ್ಯಾಪ್ ಆಗಿರುತ್ತಾರೆ.

ಜಾಹೀರಾತು

ಮಹಿಳೆಯು 94-ಸಿ ಅಡಿಯಲ್ಲಿ ಜಾಗ ಮಂಜೂರಿಗಾಗಿ ಅರ್ಜಿ ಸಲ್ಲಿಸಿದ್ದು ಸುಮಾರು ಒಂದೂವರೆ  ವರ್ಷ ಆದರೂ ಅವರ ಅರ್ಜಿಯನ್ನು ಗ್ರಾಮ ಲೆಕ್ಕಾಧಿಕಾರಿಯವರು ಬಾಕಿ ಇಟ್ಟುಕೊಂಡು ಪ್ರತಿ ಸಲ ಹೋಗಿ ಕೇಳಿದಾಗ ಲಂಚದ ಹಣಕ್ಕೆ ಬೇಡಿಕೆ ಇಟ್ಟು ಕಾಲ ವಿಳಂಬ ಮಾಡಿದ್ದರು. ಅರ್ಜಿದಾರರಿಂದ ಈ ಹಿಂದೆ ರೂ 3.000 ಕೆಲಸದ ಪ್ರಯುಕ್ತ ಲಂಚ ಪಡೆದಿದ್ದರು.

ಭ್ರಷ್ಟಾಚಾರ ನಿಗ್ರಹ ದಳ ಪಶ್ಚಿಮ ವಲಯ ಪೊಲೀಸ್ ಅಧೀಕ್ಷಕಿ ಶೃತಿ ಎನ್. ಎಸ್.,  ಇವರ ಮಾರ್ಗದರ್ಶನದಲ್ಲಿ ಎಸಿಬಿ ಡಿವೈಎಸ್‍ಪಿ ಸುಧೀರ್ ಎಂ ಹೆಗಡೆ ಇವರ ನೇತ್ರೃತ್ವದ ತಂಡದಲ್ಲಿ ಪೊಲೀಸ್ ನಿರೀಕ್ಷಕ ಮೋಹನ್ ಕೊಟ್ಟಾರಿ, ಸಿಬ್ಬಂದಿಯವರಾದ  ಹರಿಪ್ರಸಾದ್  ಉಮೇಶ್, ರಾಧಕೃಷ್ಣ, ಪ್ರಶಾಂತ್, ರಾಧಕೃಷ ಡಿ.ಎ, ವೈಶಾಲಿ,  ರಾಕೇಶ್, ಗಣೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.  ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ